ಯುಪಿಎ ಪಾಲುದಾರ ಕಾಂಗ್ರೆಸ್ ಮತ್ತು ಆರ್ಜೆಡಿ ಪಕ್ಷಗಳು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರಿಗೆ ಬೆಂಬಲವಾಗಿ ನಿಂತಿವೆ. ‘ಜಾರ್ಖಂಡ್ ಮಣ್ಣಿನ ಮಗ’ ಯಶವಂತ ಸಿನ್ಹಾ ಅವರಿಗೇ ತನ್ನ ಬೆಂಬಲವೆಂದು ಜೆಎಂಎಂ ಪಕ್ಷ ಆರಂಭದಲ್ಲಿ ಹೇಳಿತ್ತು. ಆದರೆ, ಎನ್ಡಿಎ ದ್ರೌಪದಿ ಮುರ್ಮು ಅವರ ಹೆಸರು ಘೋಷಿಸಿ, ಅವರು ಗೆದ್ದರೆ ರಾಷ್ಟ್ರಪತಿ ಹುದ್ದೆಗೇರಿದ ದೇಶದ ಮೊದಲ ಬುಡಕಟ್ಟು ಮಹಿಳೆ ಎನಿಸಿಕೊಳ್ಳುತ್ತಾರೆ ಎಂದಾಗ, ಜೆಎಎಂ ತನ್ನ ನಿಲುವು ಬದಲಿಸಬೇಕಾಯಿತು ಎನ್ನುವುದು ಸ್ಪಷ್ಟ.