<p><strong>ನವದೆಹಲಿ:</strong> ‘ಕಾಂಗ್ರೆಸ್ ಈಗ ಕಣ್ಮುಚ್ಚಿಕೊಂಡು ಮುನ್ನಡೆಯುತ್ತಿದೆ’ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.</p>.<p>ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಕಪಿಲ್ ಸಿಬಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ಯುವಕರು ಪಕ್ಷ ತೊರೆಯುತ್ತಿದ್ದಾರೆ. ಪಕ್ಷವನ್ನು ಬಲಪಡಿಸಲು ಯತ್ನಿಸುತ್ತಿರುವ ಹಳಬರಾದ ನಮ್ಮನ್ನು ದೂಷಿಸಲಾಗುತ್ತಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>‘ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸಲು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೈಗೊಂಡ ಕ್ರಮಗಳಿಂದ ನನಗೆ ಸಂತೋಷವಾಗಿದೆ. ಆದರೆ, ಪಕ್ಷವನ್ನು ಬಲಪಡಿಸಲು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲೇಬೇಕು ಎನ್ನುವ ನಮ್ಮ ಒತ್ತಾಯವನ್ನು ಮತ್ತೊಮ್ಮೆ ಹೇಳುತ್ತೇವೆ’ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.</p>.<p>‘ಪಕ್ಷಕ್ಕೆ ಪುನಶ್ಚೇತನ ಮತ್ತು ಹೊಸತನ ನೀಡುವ ನಿಟ್ಟಿನಲ್ಲಿ ಕೈಗೊಳ್ಳುವ ಪ್ರಯತ್ನಗಳನ್ನು ನಾನು ಮತ್ತು ಪಕ್ಷದ ಮುಖಂಡರು ಬೆಂಬಲಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಕಾಂಗ್ರೆಸ್ ಬಲಪಡಿಸದೆಯೇ ವಿರೋಧ ಪಕ್ಷಗಳಲ್ಲಿ ಒಗ್ಗಟ್ಟು ಮೂಡಿಸಲು ಸಾಧ್ಯವಿಲ್ಲ. ಹೀಗಾಗಿ, ಪಕ್ಷಕ್ಕೆ ಪುನಶ್ಚೇತನ ನೀಡಬೇಕು ಎಂದು ಪದೇ ಪದೇ ಒತ್ತಾಯಿಸುತ್ತಿದ್ದೇನೆ. ಒಂದು ವೇಳೆ ಸೋನಿಯಾ ಗಾಂಧಿ ಅವರ ಕಾರ್ಯಗಳಿಗೆ ಅಡ್ಡಿಯಾಗಿದ್ದರೆ ನನ್ನನ್ನು ಸಹ ಹೊರಗೆ ಹಾಕಬಹುದು’ ಎಂದು ತಿಳಿಸಿದ್ದಾರೆ.</p>.<p>‘ಕಾಂಗ್ರೆಸ್ ತನ್ನ ಮಹತ್ವವನ್ನು ವಾಸ್ತವಿಕ ನೆಲೆಗಟ್ಟಿನಲ್ಲಿ ತಿಳಿದುಕೊಳ್ಳಬೇಕಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕಾಂಗ್ರೆಸ್ ಈಗ ಕಣ್ಮುಚ್ಚಿಕೊಂಡು ಮುನ್ನಡೆಯುತ್ತಿದೆ’ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಹೇಳಿದ್ದಾರೆ.</p>.<p>ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಕಪಿಲ್ ಸಿಬಲ್ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ಯುವಕರು ಪಕ್ಷ ತೊರೆಯುತ್ತಿದ್ದಾರೆ. ಪಕ್ಷವನ್ನು ಬಲಪಡಿಸಲು ಯತ್ನಿಸುತ್ತಿರುವ ಹಳಬರಾದ ನಮ್ಮನ್ನು ದೂಷಿಸಲಾಗುತ್ತಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<p>‘ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸಲು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೈಗೊಂಡ ಕ್ರಮಗಳಿಂದ ನನಗೆ ಸಂತೋಷವಾಗಿದೆ. ಆದರೆ, ಪಕ್ಷವನ್ನು ಬಲಪಡಿಸಲು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲೇಬೇಕು ಎನ್ನುವ ನಮ್ಮ ಒತ್ತಾಯವನ್ನು ಮತ್ತೊಮ್ಮೆ ಹೇಳುತ್ತೇವೆ’ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.</p>.<p>‘ಪಕ್ಷಕ್ಕೆ ಪುನಶ್ಚೇತನ ಮತ್ತು ಹೊಸತನ ನೀಡುವ ನಿಟ್ಟಿನಲ್ಲಿ ಕೈಗೊಳ್ಳುವ ಪ್ರಯತ್ನಗಳನ್ನು ನಾನು ಮತ್ತು ಪಕ್ಷದ ಮುಖಂಡರು ಬೆಂಬಲಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.</p>.<p>‘ಕಾಂಗ್ರೆಸ್ ಬಲಪಡಿಸದೆಯೇ ವಿರೋಧ ಪಕ್ಷಗಳಲ್ಲಿ ಒಗ್ಗಟ್ಟು ಮೂಡಿಸಲು ಸಾಧ್ಯವಿಲ್ಲ. ಹೀಗಾಗಿ, ಪಕ್ಷಕ್ಕೆ ಪುನಶ್ಚೇತನ ನೀಡಬೇಕು ಎಂದು ಪದೇ ಪದೇ ಒತ್ತಾಯಿಸುತ್ತಿದ್ದೇನೆ. ಒಂದು ವೇಳೆ ಸೋನಿಯಾ ಗಾಂಧಿ ಅವರ ಕಾರ್ಯಗಳಿಗೆ ಅಡ್ಡಿಯಾಗಿದ್ದರೆ ನನ್ನನ್ನು ಸಹ ಹೊರಗೆ ಹಾಕಬಹುದು’ ಎಂದು ತಿಳಿಸಿದ್ದಾರೆ.</p>.<p>‘ಕಾಂಗ್ರೆಸ್ ತನ್ನ ಮಹತ್ವವನ್ನು ವಾಸ್ತವಿಕ ನೆಲೆಗಟ್ಟಿನಲ್ಲಿ ತಿಳಿದುಕೊಳ್ಳಬೇಕಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>