ಪಕ್ಷದ ಮೂಲಗಳ ಪ್ರಕಾರ, ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿರುವ ಈ ಗುಂಪಿನಸದಸ್ಯರು, ಪಕ್ಷದ ಕೆಲ ಆಯಕಟ್ಟಿನ ಸ್ಥಾನಗಳಿಂದ ರಾಹುಲ್ ಗಾಂಧಿ ನಿಷ್ಠರನ್ನು ಪದಚ್ಯುತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯವಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲ, ಪ್ರಧಾನ ಕಾರ್ಯದರ್ಶಿ ಅಜಯ್ ಮೆಕೆನ್ ಅವರನ್ನು ಗುರಿಯಾಗಿಸಿದ್ದಾರೆ.