ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡ ಬದಲಾವಣೆಗಾಗಿ ಹೋರಾಟ; ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Last Updated 30 ಸೆಪ್ಟೆಂಬರ್ 2022, 10:31 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.

ಎಐಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಖರ್ಗೆ, ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಬದಲಾವಣೆಗಾಗಿ ಹೋರಾಟ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ತಮ್ಮ ಉಮೇದುವಾರಿಕೆಯನ್ನು ಬೆಂಬಲಿಸುವಂತೆ ಕಾಂಗ್ರೆಸ್‌ನ ಎಲ್ಲ ಪ್ರತಿನಿಧಿಗಳಿಗೆ ಕರೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲ ರಾಜ್ಯಗಳ ನಾಯಕರಿಗೆ ಧನ್ಯವಾದಗಳು ಎಂದು ಹೇಳಿದರು.

ಖರ್ಗೆ ಉಮೇದುವಾರಿಕೆಯನ್ನು ಹಿರಿಯ ನಾಯಕರಾದ ಅಶೋಕ್ ಗೆಹಲೋತ್, ದಿಗ್ವಿಜಯ್ ಸಿಂಗ್, ಪ್ರಮೋದ್ ತಿವಾರಿ, ಪಿಎಲ್ ಪುನಿಯಾ, ಎ.ಕೆ. ಆ್ಯಂಟನಿ, ಪವನ್ ಕುಮಾರ್ ಬನ್ಸಲ್ ಮತ್ತು ಮುಕುಲ್ ವಾಸ್ನಿಕ್ಪ್ರತಿಪಾದಿಸಿದ್ದರು.

ಜಿ23 ನಾಯಕರಾದ ಆನಂದ್ ಶರ್ಮಾ ಮತ್ತು ಮನೀಶ್ ತಿವಾರಿ ಸಹ ಬೆಂಬಲ ಸೂಚಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಬಳಿಕ ಅ.19ರಂದು ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT