ನಾನು ನಾಮಪತ್ರ ಸಲ್ಲಿಸುವಾಗ ಸಿಗುವ ಬೆಂಬಲವನ್ನು ನೀವೇ ನೋಡಲಿದ್ದೀರಿ. ಬಹುತೇಕ ರಾಜ್ಯಗಳಿಂದ ಪಕ್ಷದ ಕಾರ್ಯಕರ್ತರಿಂದ ಬೆಂಬಲ ಇದ್ದುದ್ದರಿಂದ ಕಣಕ್ಕಿಳಿದಿದ್ದೇನೆ. ದೇಶದ ವಿವಿಧ ಭಾಗದ ಜನರು ನನ್ನಲ್ಲಿ ಕಣಕ್ಕಿಳಿಯಲು ವಿನಂತಿಸಿದ್ದಾರೆ ಎಂದು ತರೂರ್ ತಮ್ಮ ಉಮೇದುವಾರಿಕೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದೇನೆ. ಈ ಕುರಿತು ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.
ಸೆಪ್ಟೆಂಬರ್ 30ರಂದು ಶಶಿ ತರೂರ್ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ. 19ರಂದು ಫಲಿತಾಂಶ ಹೊರಬೀಳಲಿದೆ.