ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆಗಾಗಿ ಎಐಡಿಎಂಕೆ ಬೆಂಬಲ ಕೋರಿಲ್ಲ: ವರದಿ ಅಲ್ಲಗಳೆದ ಕಾಂಗ್ರೆಸ್

Last Updated 3 ಜುಲೈ 2022, 7:49 IST
ಅಕ್ಷರ ಗಾತ್ರ

ನವದೆಹಲಿ: ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತಸಿನ್ಹಾ ಅವರಿಗೆ ಬೆಂಬಲ ಕೋರಿ ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ಅವರಿಗೆ ರಾಹುಲ್ ಗಾಂಧಿ ಕರೆ ಮಾಡಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಕಾಂಗ್ರೆಸ್ ಭಾನುವಾರ ‘ಬೊಗಳೆ’ ಎಂದು ತಳ್ಳಿಹಾಕಿದೆ.

ರಾಜ್ಯಸಭೆಯ ಕಾಂಗ್ರೆಸ್‌ ಸದಸ್ಯ ಜೈರಾಮ್ ರಮೇಶ್ ಅವರು ಈ ಬಗ್ಗೆ ಭಾನುವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಧ್ಯಮ ವರದಿ ‘ಬೋಗಸ್, ಸುಳ್ಳು‘ ಮತ್ತು ‘ಗೊಂದಲ ಬಿತ್ತುವ ಕಿಡಿಗೇಡಿತನದ ಪ್ರಯತ್ನ‘ ಎಂದು ಹೇಳಿದ್ದಾರೆ.

‘ಇದು ಸಂಪೂರ್ಣ ಸುಳ್ಳು. ಅಂತಹ ಯಾವುದೇ ಫೋನ್ ಕರೆಯನ್ನು ರಾಹುಲ್‌ ಮಾಡಿಲ್ಲ. ಡಿಎಂಕೆ-ಕಾಂಗ್ರೆಸ್ ಮೈತ್ರಿ ಗಟ್ಟಿಯಾಗಿದೆ. ಗೊಂದಲವನ್ನು ಬಿತ್ತುವ ಮತ್ತು ದುರ್ಬಲಗೊಳಿಸುವ ಇಂತಹ ಕುಚೇಷ್ಟೆಯ ಪ್ರಯತ್ನಗಳನ್ನು ತಡೆದುಕೊಳ್ಳುವಷ್ಟು ಮೈತ್ರಿ ದೃಢವಾಗಿದೆ’ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಮಿತ್ರ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿಸಿವೆ. ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಒಡಿಶಾದ ಬುಡಕಟ್ಟು ಮೂಲದ ದ್ರೌಪದಿ ಮುರ್ಮು ಅವರು ಅಭ್ಯರ್ಥಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT