<p><strong>ನವದೆಹಲಿ:</strong> ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತಸಿನ್ಹಾ ಅವರಿಗೆ ಬೆಂಬಲ ಕೋರಿ ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ಅವರಿಗೆ ರಾಹುಲ್ ಗಾಂಧಿ ಕರೆ ಮಾಡಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಕಾಂಗ್ರೆಸ್ ಭಾನುವಾರ ‘ಬೊಗಳೆ’ ಎಂದು ತಳ್ಳಿಹಾಕಿದೆ.</p>.<p>ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಜೈರಾಮ್ ರಮೇಶ್ ಅವರು ಈ ಬಗ್ಗೆ ಭಾನುವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಧ್ಯಮ ವರದಿ ‘ಬೋಗಸ್, ಸುಳ್ಳು‘ ಮತ್ತು ‘ಗೊಂದಲ ಬಿತ್ತುವ ಕಿಡಿಗೇಡಿತನದ ಪ್ರಯತ್ನ‘ ಎಂದು ಹೇಳಿದ್ದಾರೆ.</p>.<p>‘ಇದು ಸಂಪೂರ್ಣ ಸುಳ್ಳು. ಅಂತಹ ಯಾವುದೇ ಫೋನ್ ಕರೆಯನ್ನು ರಾಹುಲ್ ಮಾಡಿಲ್ಲ. ಡಿಎಂಕೆ-ಕಾಂಗ್ರೆಸ್ ಮೈತ್ರಿ ಗಟ್ಟಿಯಾಗಿದೆ. ಗೊಂದಲವನ್ನು ಬಿತ್ತುವ ಮತ್ತು ದುರ್ಬಲಗೊಳಿಸುವ ಇಂತಹ ಕುಚೇಷ್ಟೆಯ ಪ್ರಯತ್ನಗಳನ್ನು ತಡೆದುಕೊಳ್ಳುವಷ್ಟು ಮೈತ್ರಿ ದೃಢವಾಗಿದೆ’ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಮಿತ್ರ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿಸಿವೆ. ಬಿಜೆಪಿ ನೇತೃತ್ವದ ಎನ್ಡಿಎಯಿಂದ ಒಡಿಶಾದ ಬುಡಕಟ್ಟು ಮೂಲದ ದ್ರೌಪದಿ ಮುರ್ಮು ಅವರು ಅಭ್ಯರ್ಥಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತಸಿನ್ಹಾ ಅವರಿಗೆ ಬೆಂಬಲ ಕೋರಿ ಎಐಎಡಿಎಂಕೆ ನಾಯಕ ಇ ಪಳನಿಸ್ವಾಮಿ ಅವರಿಗೆ ರಾಹುಲ್ ಗಾಂಧಿ ಕರೆ ಮಾಡಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಕಾಂಗ್ರೆಸ್ ಭಾನುವಾರ ‘ಬೊಗಳೆ’ ಎಂದು ತಳ್ಳಿಹಾಕಿದೆ.</p>.<p>ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಜೈರಾಮ್ ರಮೇಶ್ ಅವರು ಈ ಬಗ್ಗೆ ಭಾನುವಾರ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಧ್ಯಮ ವರದಿ ‘ಬೋಗಸ್, ಸುಳ್ಳು‘ ಮತ್ತು ‘ಗೊಂದಲ ಬಿತ್ತುವ ಕಿಡಿಗೇಡಿತನದ ಪ್ರಯತ್ನ‘ ಎಂದು ಹೇಳಿದ್ದಾರೆ.</p>.<p>‘ಇದು ಸಂಪೂರ್ಣ ಸುಳ್ಳು. ಅಂತಹ ಯಾವುದೇ ಫೋನ್ ಕರೆಯನ್ನು ರಾಹುಲ್ ಮಾಡಿಲ್ಲ. ಡಿಎಂಕೆ-ಕಾಂಗ್ರೆಸ್ ಮೈತ್ರಿ ಗಟ್ಟಿಯಾಗಿದೆ. ಗೊಂದಲವನ್ನು ಬಿತ್ತುವ ಮತ್ತು ದುರ್ಬಲಗೊಳಿಸುವ ಇಂತಹ ಕುಚೇಷ್ಟೆಯ ಪ್ರಯತ್ನಗಳನ್ನು ತಡೆದುಕೊಳ್ಳುವಷ್ಟು ಮೈತ್ರಿ ದೃಢವಾಗಿದೆ’ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ ಮಿತ್ರ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿಸಿವೆ. ಬಿಜೆಪಿ ನೇತೃತ್ವದ ಎನ್ಡಿಎಯಿಂದ ಒಡಿಶಾದ ಬುಡಕಟ್ಟು ಮೂಲದ ದ್ರೌಪದಿ ಮುರ್ಮು ಅವರು ಅಭ್ಯರ್ಥಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>