ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಅಧಿವೇಶನದಲ್ಲಿ ಚೀನಾ ಕುರಿತ ಚರ್ಚೆಗೆ ಕಾಂಗ್ರೆಸ್‌ ಒತ್ತಾಯ

Last Updated 27 ಜನವರಿ 2023, 14:26 IST
ಅಕ್ಷರ ಗಾತ್ರ

ನವದೆಹಲಿ: ಡಿಜಿಪಿ-ಐಜಿಪಿ ವಾರ್ಷಿಕ ಸಮ್ಮೇಳನದಲ್ಲಿ ಮಂಡಿಸಲಾದ ಸಂಶೋಧನಾ ಪ್ರಬಂಧವನ್ನು ಶುಕ್ರವಾರ ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್, ‘ಚೀನಾದ ಬಗ್ಗೆ ಸರ್ಕಾರಕ್ಕಿರುವ ಧೋರಣೆಯನ್ನು ಪ್ರಬಂಧವು ಬಹಿರಂಗಪಡಿಸಿದೆ. ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಈ ವಿಷಯದ ಬಗ್ಗೆ ಚರ್ಚೆಯಾಗಬೇಕು’ ಎಂದು ಒತ್ತಾಯಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ, ‘ಪ್ರಧಾನಿ ನರೇಂದ್ರ ಮೋದಿಯವರು ಈಗಲೂ ಚೀನಾಗೆ ಹೆದರುತ್ತಿದ್ದಾರೆಯೇ ಅಥವಾ ದೇಶವನ್ನು ಪ್ರೀತಿಸುತ್ತಾರೆಯೇ ಎಂಬುದನ್ನು ವಿವರಿಸಬೇಕು’ ಎಂದು ಕೇಳಿದ್ದಾರೆ.

‘ಮೋದಿ ಅವರು ಚೀನಾಕ್ಕೆ ನೀಡಿದ್ದ ಕ್ಲೀನ್‌ಚಿಟ್‌ ಅನ್ನು ಈ ಪ್ರಬಂಧವು ಚೂರು ಚೂರು ಮಾಡಿದೆ. ಚೀನಾ ಭಾರತದ ಭೂಪ್ರದೇಶ ಅಕ್ರಮ ಆಕ್ರಮಣವನ್ನು ಹಾಗೂ ಮೂಲಸೌಕರ್ಯಗಳನ್ನು ನಿರ್ಮಿಸಿದ್ದನ್ನು ಮೋದಿ ನೇತೃತ್ವದ ಸರ್ಕಾರ ನಿರಂತರವಾಗಿ ನಿರಾಕರಿಸಿತ್ತು. ಈ ನಿರಾಕರಣೆ ಚೀನಾವನ್ನು ಹುರಿದುಂಬಿಸಿದೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT