‘ರಾಜಕೀಯ ಹಸ್ತಕ್ಷೇಪದಿಂದಾಗಿಯೇ ಸುಳ್ಳು ಮಾಹಿತಿ ನೀಡಲಾಯಿತು ಮತ್ತು ದೇಶದಲ್ಲಿ ಎಲ್ಲವೂ ಸಹಜ ಸ್ಥಿತಿಯಲ್ಲಿದೆ ಎನ್ನುವಂತೆ ಬಿಂಬಿಸಲಾಯಿತು ಎಂದು ಐಸಿಎಂಆರ್ನ ಮಾಜಿ ವಿಜ್ಞಾನಿಗಳು ಬಹಿರಂಗ ಹೇಳಿಕೆ ನೀಡಿದ್ದಾರೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರದ ಮಾಜಿ ಆರೋಗ್ಯ ಸಚಿವ ಹರ್ಷ ವರ್ಧನ್ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಹಿರಿಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.