<p><strong>ನವದೆಹಲಿ:</strong> ಮುಂದಿನ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಯೋಜನೆಯನ್ನು ಸಿದ್ಧಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಪ್ರಮುಖವಾಗಿ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಎತ್ತಿ ಹಿಡಿಯಲಿದೆ ಎಂದು ವರದಿಯಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/warrant-against-dk-sivakumar-866701.html" itemprop="url">ಡಿ.ಕೆ ಶಿವಕುಮಾರ್ ವಿರುದ್ಧ ವಾರಂಟ್ </a></p>.<p>ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರೇ ಮುಂದುವರಿಯಬೇಕು ಮತ್ತು ರಾಷ್ಟ್ರವ್ಯಾಪಿ ಆಂದೋಲನವನ್ನು ಮುನ್ನಡೆಸಬೇಕು ಎಂಬ ಅಭಿಪ್ರಾಯ ಮೂಡಿಬಂದಿದೆ ಎನ್ನಲಾಗಿದೆ.</p>.<p>ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಪ್ರತಿಭಟನೆ ಸಮಯದಲ್ಲಿ ಉಲ್ಲೇಖಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ದಿಗ್ವಿಜಯ ಸಿಂಗ್ ಅಧ್ಯಕ್ಷತೆಯ ಸಮಿತಿಯು ಸಮಸ್ಯೆಗಳನ್ನು ಪಟ್ಟಿ ಮಾಡಿ ಯೋಜನೆಯನ್ನು ಸಿದ್ಧಪಡಿಸಲಿವೆ. ಬಳಿಕ ಅಂತಿಮ ಒಪ್ಪಿಗಾಗಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ವರದಿಯನ್ನು ಸಲ್ಲಿಸುತ್ತಾರೆ ಎಂದು ತಿಳಿಸಿವೆ.</p>.<p>ರಾಷ್ಟ್ರವ್ಯಾಪಿ ಆಂದೋಲನ ಯಶಸ್ವಿಗೊಳಿಸಲು ರಾಹುಲ್ ಗಾಂಧಿ ಅವರೇ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಬೇಕು ಎಂದು ಸಮಿತಿ ಸದಸ್ಯರಾದ ರಿಪುನ್ ಬೋರಾ ಹಾಗೂ ಉದಿತ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಸಾಮಾಜಿಕ ಸಂಘಟನೆಗಳು ಆಂದೋಲನದಲ್ಲಿ ಭಾಗವಹಿಸಬೇಕು. ಇದರಿಂದ ಹೆಚ್ಚಿನ ಯಶಸ್ಸು ಸಿಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡಾ ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂದಿನ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ಯೋಜನೆಯನ್ನು ಸಿದ್ಧಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<p>ಪ್ರಮುಖವಾಗಿ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಗಳನ್ನು ಎತ್ತಿ ಹಿಡಿಯಲಿದೆ ಎಂದು ವರದಿಯಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/karnataka-news/warrant-against-dk-sivakumar-866701.html" itemprop="url">ಡಿ.ಕೆ ಶಿವಕುಮಾರ್ ವಿರುದ್ಧ ವಾರಂಟ್ </a></p>.<p>ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರೇ ಮುಂದುವರಿಯಬೇಕು ಮತ್ತು ರಾಷ್ಟ್ರವ್ಯಾಪಿ ಆಂದೋಲನವನ್ನು ಮುನ್ನಡೆಸಬೇಕು ಎಂಬ ಅಭಿಪ್ರಾಯ ಮೂಡಿಬಂದಿದೆ ಎನ್ನಲಾಗಿದೆ.</p>.<p>ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಪ್ರತಿಭಟನೆ ಸಮಯದಲ್ಲಿ ಉಲ್ಲೇಖಿಸುವ ವಿಷಯಗಳ ಬಗ್ಗೆ ಚರ್ಚಿಸಿದರು. ದಿಗ್ವಿಜಯ ಸಿಂಗ್ ಅಧ್ಯಕ್ಷತೆಯ ಸಮಿತಿಯು ಸಮಸ್ಯೆಗಳನ್ನು ಪಟ್ಟಿ ಮಾಡಿ ಯೋಜನೆಯನ್ನು ಸಿದ್ಧಪಡಿಸಲಿವೆ. ಬಳಿಕ ಅಂತಿಮ ಒಪ್ಪಿಗಾಗಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ವರದಿಯನ್ನು ಸಲ್ಲಿಸುತ್ತಾರೆ ಎಂದು ತಿಳಿಸಿವೆ.</p>.<p>ರಾಷ್ಟ್ರವ್ಯಾಪಿ ಆಂದೋಲನ ಯಶಸ್ವಿಗೊಳಿಸಲು ರಾಹುಲ್ ಗಾಂಧಿ ಅವರೇ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಬೇಕು ಎಂದು ಸಮಿತಿ ಸದಸ್ಯರಾದ ರಿಪುನ್ ಬೋರಾ ಹಾಗೂ ಉದಿತ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಸಾಮಾಜಿಕ ಸಂಘಟನೆಗಳು ಆಂದೋಲನದಲ್ಲಿ ಭಾಗವಹಿಸಬೇಕು. ಇದರಿಂದ ಹೆಚ್ಚಿನ ಯಶಸ್ಸು ಸಿಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡಾ ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>