<p class="title"><strong>ನವದೆಹಲಿ: </strong>ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖಂಡರಾದ ಬಿ.ಎಲ್.ಸಂತೋಷ್, ಸ್ಮೃತಿ ಇರಾನಿ ಮತ್ತು ವಕ್ತಾರ ಸಂಬೀತ್ ಪಾತ್ರಾ ಅವರ ಟ್ವಿಟರ್ ಖಾತೆಗಳನ್ನು ಶಾಶ್ವತವಾಗಿ ಅಮಾನತುಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಪಡಿಸಿದೆ. ಈ ಬಗ್ಗೆ ಟ್ವಿಟರ್ ಆಡಳಿತಕ್ಕೆ ಪತ್ರ ಬರೆದಿದೆ.</p>.<p class="title">ಆಡಳಿತದಲ್ಲಿ ತಮ್ಮ ವೈಫಲ್ಯಗಳನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ಟೂಲ್ಕಿಟ್ ಸಂಬಂಧಿಸಿ ತಪ್ಪು ಮಾಹಿತಿಗಳನ್ನು ಇವರು ಹಂಚಿಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p class="title">ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ರಾಜೀವ್ ಗೌಡ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷ ರೋಹನ್ ಗುಪ್ತಾ ಅವರು ಪತ್ರದಲ್ಲಿ, ಬಿಜೆಪಿಯ ಈ ನಾಲ್ವರು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸರ್ಕಾರದ ವೈಫಲ್ಯ ಮರೆಮಾಚಲು ಟ್ವಿಟರ್ ವೇದಿಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.</p>.<p class="title">ಬಿಜೆಪಿ ನಾಯಕರು ಲೆಟರ್ಹೆಡ್ ಅನ್ನು ತಿರುಚಿದ್ದು ದುರುದ್ದೇಶದ, ತಪ್ಪಾದ, ತಿರುಚಲಾದ ಮಾಹಿತಿಯನ್ನು ಮುದ್ರಣ ಮಾಡಿ ಹಂಚಿಕೆ ಮಾಡಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p class="title">ರೂಪಾಂತರ ಸೋಂಕು ಕುರಿತಂತೆ ಕಾಂಗ್ರೆಸ್ ಪ್ರಧಾನಿ ಮೋದಿ ಅವರ ವರ್ಚಸ್ಸಿಗೆ ಕುಂದು ತರುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಪೂರಕವಾಗಿ ಟೂಲ್ಕಿಟ್ ಉಲ್ಲೇಖಿಸಿತ್ತು. ಇದು, ಉಭಯ ಪಕ್ಷಗಳ ಮುಖಂಡರ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖಂಡರಾದ ಬಿ.ಎಲ್.ಸಂತೋಷ್, ಸ್ಮೃತಿ ಇರಾನಿ ಮತ್ತು ವಕ್ತಾರ ಸಂಬೀತ್ ಪಾತ್ರಾ ಅವರ ಟ್ವಿಟರ್ ಖಾತೆಗಳನ್ನು ಶಾಶ್ವತವಾಗಿ ಅಮಾನತುಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಪಡಿಸಿದೆ. ಈ ಬಗ್ಗೆ ಟ್ವಿಟರ್ ಆಡಳಿತಕ್ಕೆ ಪತ್ರ ಬರೆದಿದೆ.</p>.<p class="title">ಆಡಳಿತದಲ್ಲಿ ತಮ್ಮ ವೈಫಲ್ಯಗಳನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ಟೂಲ್ಕಿಟ್ ಸಂಬಂಧಿಸಿ ತಪ್ಪು ಮಾಹಿತಿಗಳನ್ನು ಇವರು ಹಂಚಿಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p class="title">ಎಐಸಿಸಿ ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ರಾಜೀವ್ ಗೌಡ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷ ರೋಹನ್ ಗುಪ್ತಾ ಅವರು ಪತ್ರದಲ್ಲಿ, ಬಿಜೆಪಿಯ ಈ ನಾಲ್ವರು ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸರ್ಕಾರದ ವೈಫಲ್ಯ ಮರೆಮಾಚಲು ಟ್ವಿಟರ್ ವೇದಿಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.</p>.<p class="title">ಬಿಜೆಪಿ ನಾಯಕರು ಲೆಟರ್ಹೆಡ್ ಅನ್ನು ತಿರುಚಿದ್ದು ದುರುದ್ದೇಶದ, ತಪ್ಪಾದ, ತಿರುಚಲಾದ ಮಾಹಿತಿಯನ್ನು ಮುದ್ರಣ ಮಾಡಿ ಹಂಚಿಕೆ ಮಾಡಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p class="title">ರೂಪಾಂತರ ಸೋಂಕು ಕುರಿತಂತೆ ಕಾಂಗ್ರೆಸ್ ಪ್ರಧಾನಿ ಮೋದಿ ಅವರ ವರ್ಚಸ್ಸಿಗೆ ಕುಂದು ತರುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಪೂರಕವಾಗಿ ಟೂಲ್ಕಿಟ್ ಉಲ್ಲೇಖಿಸಿತ್ತು. ಇದು, ಉಭಯ ಪಕ್ಷಗಳ ಮುಖಂಡರ ನಡುವೆ ವಾಗ್ವಾದಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>