<p><strong>ನವದೆಹಲಿ: </strong>ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ದೇಶದ ಚುನಾವಣಾ ವಿಷಯದಲ್ಲಿ ಫೇಸ್ಬುಕ್ ಇಂಡಿಯಾ ಹಸ್ತಕ್ಷೇಪ ಮಾಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈ ಸಂಬಂಧ ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ಬರ್ಗ್ಗೆ ಮಂಗಳವಾರ ಪತ್ರ ಬರೆದಿದ್ದು, ಫೇಸ್ಬುಕ್ ಇಂಡಿಯಾ ನಾಯಕತ್ವ ತಂಡದ ನಡವಳಿಕೆ ಮತ್ತು ಕಾರ್ಯಾಚರಣೆಗಳ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸುವಂತೆ ಒತ್ತಾಯಿಸಿದೆ.</p>.<p>ಭಾರತದ ವಿಷಯಗಳನ್ನು ನಿರ್ವಹಣೆ ಮಾಡುತ್ತಿರುವ ಫೇಸ್ಬುಕ್ ಇಂಡಿಯಾ ತಂಡದ ನಾಯಕತ್ವದ ಕಾರ್ಯನಿರ್ವಹಣೆ ಕುರಿತು ಫೇಸ್ಬುಕ್ ಕೇಂದ್ರ ಕಚೇರಿ ಹಂತದಲ್ಲಿ ಉನ್ನತಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕು. ಒಂದೆರಡು ತಿಂಗಳಲ್ಲಿ ವರದಿ ನೀಡಬೇಕು. ಆ ವರದಿಯನ್ನು ಸಾರ್ವಜನಿಕಗೊಳಿಸಬೇಕು’ ಎಂದುಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪತ್ರದಲ್ಲಿ ಆಗ್ರಹಿಸಿದ್ದಾರೆ.</p>.<p>’ತನಿಖೆಯ ಮೇಲೆ ಪ್ರಭಾವಬೀರದಂತೆ ತಡೆಯುವುದಕ್ಕಾಗಿ ಫೇಸ್ಬುಕ್ ಇಂಡಿಯಾ ಕಾರ್ಯಾಚರಣೆ ಮುನ್ನಡೆಸಲು ಹೊಸ ತಂಡವನ್ನು ಪರಿಗಣಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ನಲ್ಲಿ ಪ್ರಕಟವಾದ ’ಬಿಜೆಪಿ ನಾಯಕರ ದ್ವೇಷದ ಮಾತುಗಳಿಗೆ ಫೇಸ್ಬುಕ್ನ ನಿಯಮಗಳು ಅನ್ವಯವಾಗುವುದಿಲ್ಲ’ ಎಂಬ ವರದಿಯನ್ನು ಆಧರಿಸಿ ಕಾಂಗ್ರೆಸ್ ಮತ್ತು ಇತರೆ ವಿರೋಧಪಕ್ಷಗಳು ಫೇಸ್ಬುಕ್ ವಿರುದ್ಧ ಹರಿಹಾಯ್ದಿದ್ದವು.</p>.<p>ಇದಕ್ಕೆ ಪ್ರತಿಕ್ರಿಯಿಸಿದ್ದ ಫೇಸ್ಬುಕ್ ಸಂಸ್ಥೆ ’ಕಂಪನಿ ಸಾಮಾಜಿಕ ಮಾಧ್ಯಮ ವೇದಿಕೆಯು ದ್ವೇಷದ ಮಾತು ಮತ್ತು ಹಿಂಸೆಯನ್ನು ಪ್ರಚೋದಿಸುವ ವಿಷಯವನ್ನು ನಿಷೇಧಿಸುತ್ತದೆ’ ಎಂದು ಹೇಳಿತ್ತು. ಈ ವಿಷಯದಲ್ಲಿ ರಾಜಕೀಯ ನೀತಿಗಳನ್ನು ಪರಿಗಣಿಸದೆ ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸಲಾಗಿದೆ’ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ದೇಶದ ಚುನಾವಣಾ ವಿಷಯದಲ್ಲಿ ಫೇಸ್ಬುಕ್ ಇಂಡಿಯಾ ಹಸ್ತಕ್ಷೇಪ ಮಾಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈ ಸಂಬಂಧ ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ಬರ್ಗ್ಗೆ ಮಂಗಳವಾರ ಪತ್ರ ಬರೆದಿದ್ದು, ಫೇಸ್ಬುಕ್ ಇಂಡಿಯಾ ನಾಯಕತ್ವ ತಂಡದ ನಡವಳಿಕೆ ಮತ್ತು ಕಾರ್ಯಾಚರಣೆಗಳ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸುವಂತೆ ಒತ್ತಾಯಿಸಿದೆ.</p>.<p>ಭಾರತದ ವಿಷಯಗಳನ್ನು ನಿರ್ವಹಣೆ ಮಾಡುತ್ತಿರುವ ಫೇಸ್ಬುಕ್ ಇಂಡಿಯಾ ತಂಡದ ನಾಯಕತ್ವದ ಕಾರ್ಯನಿರ್ವಹಣೆ ಕುರಿತು ಫೇಸ್ಬುಕ್ ಕೇಂದ್ರ ಕಚೇರಿ ಹಂತದಲ್ಲಿ ಉನ್ನತಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕು. ಒಂದೆರಡು ತಿಂಗಳಲ್ಲಿ ವರದಿ ನೀಡಬೇಕು. ಆ ವರದಿಯನ್ನು ಸಾರ್ವಜನಿಕಗೊಳಿಸಬೇಕು’ ಎಂದುಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪತ್ರದಲ್ಲಿ ಆಗ್ರಹಿಸಿದ್ದಾರೆ.</p>.<p>’ತನಿಖೆಯ ಮೇಲೆ ಪ್ರಭಾವಬೀರದಂತೆ ತಡೆಯುವುದಕ್ಕಾಗಿ ಫೇಸ್ಬುಕ್ ಇಂಡಿಯಾ ಕಾರ್ಯಾಚರಣೆ ಮುನ್ನಡೆಸಲು ಹೊಸ ತಂಡವನ್ನು ಪರಿಗಣಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<p>ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ನಲ್ಲಿ ಪ್ರಕಟವಾದ ’ಬಿಜೆಪಿ ನಾಯಕರ ದ್ವೇಷದ ಮಾತುಗಳಿಗೆ ಫೇಸ್ಬುಕ್ನ ನಿಯಮಗಳು ಅನ್ವಯವಾಗುವುದಿಲ್ಲ’ ಎಂಬ ವರದಿಯನ್ನು ಆಧರಿಸಿ ಕಾಂಗ್ರೆಸ್ ಮತ್ತು ಇತರೆ ವಿರೋಧಪಕ್ಷಗಳು ಫೇಸ್ಬುಕ್ ವಿರುದ್ಧ ಹರಿಹಾಯ್ದಿದ್ದವು.</p>.<p>ಇದಕ್ಕೆ ಪ್ರತಿಕ್ರಿಯಿಸಿದ್ದ ಫೇಸ್ಬುಕ್ ಸಂಸ್ಥೆ ’ಕಂಪನಿ ಸಾಮಾಜಿಕ ಮಾಧ್ಯಮ ವೇದಿಕೆಯು ದ್ವೇಷದ ಮಾತು ಮತ್ತು ಹಿಂಸೆಯನ್ನು ಪ್ರಚೋದಿಸುವ ವಿಷಯವನ್ನು ನಿಷೇಧಿಸುತ್ತದೆ’ ಎಂದು ಹೇಳಿತ್ತು. ಈ ವಿಷಯದಲ್ಲಿ ರಾಜಕೀಯ ನೀತಿಗಳನ್ನು ಪರಿಗಣಿಸದೆ ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸಲಾಗಿದೆ’ ಎಂದು ಹೇಳಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>