<p><strong>ನವದೆಹಲಿ: </strong>ಗುರು ತೇಗ್ ಬಹದ್ದೂರ್ ಅವರ 400ನೇ ಜನ್ಮೋತ್ಸವ ಆಚರಣೆ ಸಂಬಂಧ ರಚಿಸಲಾಗುವ ಉನ್ನತ ಸಮಿತಿಗೆ ಪಂಜಾಬ್ನ ಕಾಂಗ್ರೆಸ್ ಸಂಸದರ ಪೈಕಿ ಕೆಲವರನ್ನು ನಾಮನಿರ್ದೇಶನ ಮಾಡುವಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಒತ್ತಾಯಿಸಿದ್ದಾರೆ.</p>.<p>ಅವರು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ತೇಗ್ ಬಹದ್ದೂರ್ ಅವರು ಸಿಖ್ ಧರ್ಮದ 9ನೇ ಗುರು.</p>.<p>‘ಜನ್ಮೋತ್ಸವ ಆಚರಣೆ ಉನ್ನತ ಸಮಿತಿ ಸದಸ್ಯನನ್ನಾಗಿ ನನ್ನನ್ನು ನಾಮ ನಿರ್ದೇಶನ ಮಾಡಿರುವ ಕುರಿತು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಬರೆದ ಪತ್ರ ತಲುಪಿದೆ’ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಈ ಸಮಿತಿಯಲ್ಲಿ ಬಿಜೆಪಿಯ ಕೆಲವು ಜನಪ್ರತಿನಿಧಿಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ಇದೇ ರೀತಿ, ಪಂಜಾಬ್ನಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಸಂಸದರ ಪೈಕಿ ಕೆಲವರಿಗೆ ಈ ಸಮಿತಿಯಲ್ಲಿ ಪ್ರಾತಿನಿಧ್ಯ ನೀಡಬೇಕು. ಆ ರಾಜ್ಯದ ಕಾಂಗ್ರೆಸ್ ಸಂಸದರು ಈ ಜನ್ಮೋತ್ಸವ ಕಾರ್ಯಕ್ರಮದೊಂದಿಗೆ ಧಾರ್ಮಿಕವಾಗಿ ಹಾಗೂ ಭಾವನಾತ್ಮಕವಾಗಿ ಸಂಬಂಧ ಹೊಂದಿದ್ದಾರೆ‘ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಪ್ರಧಾನಿ ಮೋದಿ ಈ ಉನ್ನತ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಒಟ್ಟು 70 ಸದಸ್ಯರನ್ನು ಸಮಿತಿ ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗುರು ತೇಗ್ ಬಹದ್ದೂರ್ ಅವರ 400ನೇ ಜನ್ಮೋತ್ಸವ ಆಚರಣೆ ಸಂಬಂಧ ರಚಿಸಲಾಗುವ ಉನ್ನತ ಸಮಿತಿಗೆ ಪಂಜಾಬ್ನ ಕಾಂಗ್ರೆಸ್ ಸಂಸದರ ಪೈಕಿ ಕೆಲವರನ್ನು ನಾಮನಿರ್ದೇಶನ ಮಾಡುವಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಒತ್ತಾಯಿಸಿದ್ದಾರೆ.</p>.<p>ಅವರು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ತೇಗ್ ಬಹದ್ದೂರ್ ಅವರು ಸಿಖ್ ಧರ್ಮದ 9ನೇ ಗುರು.</p>.<p>‘ಜನ್ಮೋತ್ಸವ ಆಚರಣೆ ಉನ್ನತ ಸಮಿತಿ ಸದಸ್ಯನನ್ನಾಗಿ ನನ್ನನ್ನು ನಾಮ ನಿರ್ದೇಶನ ಮಾಡಿರುವ ಕುರಿತು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಬರೆದ ಪತ್ರ ತಲುಪಿದೆ’ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಈ ಸಮಿತಿಯಲ್ಲಿ ಬಿಜೆಪಿಯ ಕೆಲವು ಜನಪ್ರತಿನಿಧಿಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ಇದೇ ರೀತಿ, ಪಂಜಾಬ್ನಿಂದ ಆಯ್ಕೆಯಾಗಿರುವ ಕಾಂಗ್ರೆಸ್ ಸಂಸದರ ಪೈಕಿ ಕೆಲವರಿಗೆ ಈ ಸಮಿತಿಯಲ್ಲಿ ಪ್ರಾತಿನಿಧ್ಯ ನೀಡಬೇಕು. ಆ ರಾಜ್ಯದ ಕಾಂಗ್ರೆಸ್ ಸಂಸದರು ಈ ಜನ್ಮೋತ್ಸವ ಕಾರ್ಯಕ್ರಮದೊಂದಿಗೆ ಧಾರ್ಮಿಕವಾಗಿ ಹಾಗೂ ಭಾವನಾತ್ಮಕವಾಗಿ ಸಂಬಂಧ ಹೊಂದಿದ್ದಾರೆ‘ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಪ್ರಧಾನಿ ಮೋದಿ ಈ ಉನ್ನತ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಒಟ್ಟು 70 ಸದಸ್ಯರನ್ನು ಸಮಿತಿ ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>