ರಾಜಕೀಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಕಾಂಗ್ರೆಸ್ ಸಂಘಟನೆ, ರೈತರು ಮತ್ತು ಕೃಷಿ ಕಾರ್ಮಿಕರು, ಯುವಜನತೆ – ವಿಚಾರಗಳ ಬಗ್ಗೆ ವಿಷಯ ಮಂಡನೆಯಾಗಲಿದೆ. ವಿವಿಧ ವಿಚಾರಗಳ ಬಗ್ಗೆ ಪ್ರತ್ಯೇಕ ಗುಂಪುಗಳಲ್ಲಿ ಚರ್ಚೆ ನಡೆಯಲಿದ್ದು, ಈ ವಲಯಗಳಲ್ಲಿ ಪಕ್ಷ ಅಳವಡಿಸಿಕೊಳ್ಳಬೇಕಿರುವ ಹಾದಿಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವಿವರಿಸಲಾಗುತ್ತದೆ. ಈ ವಿಚಾರಗಳನ್ನು ಕ್ರೋಢೀಕರಿಸಿ, ಸಿಡಬ್ಲ್ಯುಸಿ ಅಂತಿಮ ನಿರ್ಣಯವನ್ನು ಸಿದ್ಧಪಡಿಸಲಿದೆ.