ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಪಿಣರಾಯಿ ಹಾಗೂ ಅವರ ಕುಟುಂಬದವರ ಹೆಸರನ್ನು ಆರೋಪಿ ಸ್ವಪ್ನ ಸುರೇಶ್ ಹೇಳಿದ್ದ ಹಿನ್ನೆಲೆಯಲ್ಲಿ ನಿರಂತರ ಮೂರು ದಿನಗಳಿಂದ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ನ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ತಿರುವಂತನಪುರ, ಕೋಯಿಕ್ಕೋಡ್, ಮಲಪ್ಪುರಂ, ಕಣ್ಣೂರು ಹಾಗೂ ಇತರೆಡೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಜಾಥಾವನ್ನು ಹಮ್ಮಿಕೊಂಡಿದ್ದರು.