<p><strong>ನವದೆಹಲಿ</strong>: ‘ಒಂದು ಕುಟುಂಬಕ್ಕೆ ಒಂದೇ ಟಿಕೆಟ್’ ಎಂಬ ನಿಯಮವನ್ನು ಕಾಂಗ್ರೆಸ್ ಪಕ್ಷವು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಒಂದೇ ಕುಟುಂಬದ ಎರಡನೇ ವ್ಯಕ್ತಿಯು ಕನಿಷ್ಠ ಐದು ವರ್ಷ ಪಕ್ಷ ಸಂಘಟನೆಯಲ್ಲಿ ‘ಅಸಾಧಾರಣ ರೀತಿ’ಯಲ್ಲಿ ಕೆಲಸ ಮಾಡಿದ್ದರೆ ಅಂಥವರಿಗೆ ಈ ನಿಯಮದಿಂದ ವಿನಾಯಿತಿ ಇದೆ. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಈ ಪ್ರಸ್ತಾವವನ್ನು ಶುಕ್ರವಾರ ಮುಂದಿಡಲಾಗಿದೆ.</p>.<p>ನಿಯಮಕ್ಕೆ ಕಾಂಗ್ರೆಸ್ನಲ್ಲಿ ಸಂಪೂರ್ಣ ಸಹಮತವಿದೆ. ಚಿಂತನ ಶಿಬಿರದ ನಂತರ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಸಾಂಸ್ಥಿಕ ಬದಲಾವಣೆಗಳಾಗಲಿವೆ,’ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಾಕೆನ್ ಶಿಬಿರ ಆರಂಭಕ್ಕೂ ಮೊದಲು ತಿಳಿಸಿದ್ದರು.</p>.<p>ಪಕ್ಷದಲ್ಲಿ ಕನಿಷ್ಠ ಐದು ವರ್ಷವಾದರೂ ಕೆಲಸ ಮಾಡದ ನಾಯಕರ ಕುಟುಂಬ ಸದಸ್ಯರಿಗೆ, ಸಂಬಂಧಿಗಳಿಗೆ ಟಿಕೆಟ್ ನೀಡಬಾರದು ಎಂಬ ಪ್ರಸ್ತಾವದ ಬಗ್ಗೆ ಪಕ್ಷದಲ್ಲಿ ಸಹಮತವಿದೆ ಎಂದು ಮಾಕೆನ್ ತಿಳಿಸಿದ್ದರು. ಅದರಂತೆ ಕಾಂಗ್ರೆಸ್ ಈ ನಿಯಮವನ್ನು ಒಪ್ಪಿರುವುದಾಗಿ ಸುದ್ದಿ ಮಾಧ್ಯಮ ಎನ್ಡಿಟಿವಿ ವರದಿ ಪ್ರಕಟಿಸಿದೆ.</p>.<p>‘ಐದು ವರ್ಷಕ್ಕಿಂತಲೂ ಹೆಚ್ಚು ಕಾಲ ಒಂದೇ ಹುದ್ದೆಯಲ್ಲಿರುವವರು ಸ್ಥಾನ ತೊರೆಯಬೇಕಾಗುತ್ತದೆ. ಮತ್ತೆ ಅದೇ ಹುದ್ದೆಗೆ ಬರಬೇಕಿದ್ದರೆ ಅವರು ಮೂರು ವರ್ಷ ಕಾಯಬೇಕಾಗುತ್ತದೆ‘ ಎಂದು ಅವರು ಮಾಹಿತಿ ನೀಡಿದರು.</p>.<p><strong>ಓದಿ...</strong><a href="https://www.prajavani.net/entertainment/cinema/kangana-ranaut-supports-mahesh-babu-over-his-bollywood-cant-afford-me-remark-936410.html" target="_blank">ಬಾಲಿವುಡ್ಗೆ ನನ್ನನ್ನು ಭರಿಸಲಾಗದು: ಮಹೇಶ್ ಬಾಬು ಹೇಳಿಕೆಗೆ ಕಂಗನಾ ಪ್ರತಿಕ್ರಿಯೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಒಂದು ಕುಟುಂಬಕ್ಕೆ ಒಂದೇ ಟಿಕೆಟ್’ ಎಂಬ ನಿಯಮವನ್ನು ಕಾಂಗ್ರೆಸ್ ಪಕ್ಷವು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಒಂದೇ ಕುಟುಂಬದ ಎರಡನೇ ವ್ಯಕ್ತಿಯು ಕನಿಷ್ಠ ಐದು ವರ್ಷ ಪಕ್ಷ ಸಂಘಟನೆಯಲ್ಲಿ ‘ಅಸಾಧಾರಣ ರೀತಿ’ಯಲ್ಲಿ ಕೆಲಸ ಮಾಡಿದ್ದರೆ ಅಂಥವರಿಗೆ ಈ ನಿಯಮದಿಂದ ವಿನಾಯಿತಿ ಇದೆ. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಈ ಪ್ರಸ್ತಾವವನ್ನು ಶುಕ್ರವಾರ ಮುಂದಿಡಲಾಗಿದೆ.</p>.<p>ನಿಯಮಕ್ಕೆ ಕಾಂಗ್ರೆಸ್ನಲ್ಲಿ ಸಂಪೂರ್ಣ ಸಹಮತವಿದೆ. ಚಿಂತನ ಶಿಬಿರದ ನಂತರ ಪಕ್ಷದಲ್ಲಿ ದೊಡ್ಡ ಮಟ್ಟದಲ್ಲಿ ಸಾಂಸ್ಥಿಕ ಬದಲಾವಣೆಗಳಾಗಲಿವೆ,’ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಜಯ್ ಮಾಕೆನ್ ಶಿಬಿರ ಆರಂಭಕ್ಕೂ ಮೊದಲು ತಿಳಿಸಿದ್ದರು.</p>.<p>ಪಕ್ಷದಲ್ಲಿ ಕನಿಷ್ಠ ಐದು ವರ್ಷವಾದರೂ ಕೆಲಸ ಮಾಡದ ನಾಯಕರ ಕುಟುಂಬ ಸದಸ್ಯರಿಗೆ, ಸಂಬಂಧಿಗಳಿಗೆ ಟಿಕೆಟ್ ನೀಡಬಾರದು ಎಂಬ ಪ್ರಸ್ತಾವದ ಬಗ್ಗೆ ಪಕ್ಷದಲ್ಲಿ ಸಹಮತವಿದೆ ಎಂದು ಮಾಕೆನ್ ತಿಳಿಸಿದ್ದರು. ಅದರಂತೆ ಕಾಂಗ್ರೆಸ್ ಈ ನಿಯಮವನ್ನು ಒಪ್ಪಿರುವುದಾಗಿ ಸುದ್ದಿ ಮಾಧ್ಯಮ ಎನ್ಡಿಟಿವಿ ವರದಿ ಪ್ರಕಟಿಸಿದೆ.</p>.<p>‘ಐದು ವರ್ಷಕ್ಕಿಂತಲೂ ಹೆಚ್ಚು ಕಾಲ ಒಂದೇ ಹುದ್ದೆಯಲ್ಲಿರುವವರು ಸ್ಥಾನ ತೊರೆಯಬೇಕಾಗುತ್ತದೆ. ಮತ್ತೆ ಅದೇ ಹುದ್ದೆಗೆ ಬರಬೇಕಿದ್ದರೆ ಅವರು ಮೂರು ವರ್ಷ ಕಾಯಬೇಕಾಗುತ್ತದೆ‘ ಎಂದು ಅವರು ಮಾಹಿತಿ ನೀಡಿದರು.</p>.<p><strong>ಓದಿ...</strong><a href="https://www.prajavani.net/entertainment/cinema/kangana-ranaut-supports-mahesh-babu-over-his-bollywood-cant-afford-me-remark-936410.html" target="_blank">ಬಾಲಿವುಡ್ಗೆ ನನ್ನನ್ನು ಭರಿಸಲಾಗದು: ಮಹೇಶ್ ಬಾಬು ಹೇಳಿಕೆಗೆ ಕಂಗನಾ ಪ್ರತಿಕ್ರಿಯೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>