<p><strong>ನವದೆಹಲಿ:</strong> ಕಾಂಗ್ರೆಸ್ ಮೇಲೆ ದಾಳಿ ಮಾಡುವ ಹುನ್ನಾರದಲ್ಲಿ ಭೋಪಾಲ್ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥುರಾಂ ಗೋಡ್ಸೆ ಅವರನ್ನು ದೇಶಭಕ್ತ ಎಂದು ಪ್ರಸ್ತಾಪಿಸಿರುವುದು ಮಗದೊಮ್ಮೆ ವಿವಾದಕ್ಕೆ ಕಾರಣವಾಗಿದೆ.</p>.<p>ಕಾಂಗ್ರೆಸ್ ಎಂದಿಗೂ ದೇಶಭಕ್ತರನ್ನು ನಿಂದಿಸುತ್ತಲೇ ಬಂದಿದೆ ಎಂದು 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಠಾಕೂರ್ ವಾಗ್ದಾಳಿ ನಡೆಸಿದರು.</p>.<p>ಗೋಡ್ಸೆ ದೇಶದ ಮೊದಲ ಭಯೋತ್ಪಾದಕ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಆರೋಪದ ಬೆನ್ನಲ್ಲೇ ಪ್ರಜ್ಞಾ ಸಿಂಗ್ ಠಾಕೂರ್ ಈ ರೀತಿಯಾದ ಹೇಳಿಕೆ ನೀಡಿದ್ದಾರೆ.</p>.<p>ಕಾಂಗ್ರೆಸ್ ಎಂದಿಗೂ ದೇಶಭಕ್ತರನ್ನು ನಿಂದಿಸುತ್ತಲೇ ಬಂದಿದ್ದು, 'ಕೇಸರಿ ಉಗ್ರರು' ಎಂದು ಕರೆದಿದೆ. ಇದಕ್ಕಿಂತಲೂ ಕೆಟ್ಟದ್ದೇನೂ ಇಲ್ಲ ಮತ್ತು ಈ ವಿಷಯದ ಬಗ್ಗೆ ಹೆಚ್ಚಿನದನ್ನು ಹೇಳಲು ಬಯಸುವುದಿಲ್ಲ ಎಂದು ಗೋಡ್ಸೆ ಕುರಿತಾಗಿನ ಹೇಳಿಕೆಗೆ ಪ್ರಜ್ಞಾ ಠಾಕೂರ್ ಪ್ರತಿಕ್ರಿಯಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/mandate-of-30-days-notice-under-special-marriage-act-optional-796114.html" itemprop="url">ಅಂತರ್ ಜಾತಿ ವಿವಾಹದ ಪ್ರಕಟಣೆ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ </a></p>.<p>2019 ಮೇ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಗೋಡ್ಸೆರನ್ನು ದೇಶಭಕ್ತ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದ ಪ್ರಜ್ಞಾ ಸಿಂಗ್ ಠಾಕೂರ್, ಬಳಿಕ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚನೆ ನಡೆಸಿದ್ದರು. 2019 ನವೆಂಬರ್ನಲ್ಲಿ ಸಂಸತ್ತಿನಲ್ಲಿ ಗೋಡ್ಸೆ ಕುರಿತಾಗಿನ ವಿವಾದಾತ್ಮಕ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದರು.</p>.<p>ಕಳೆದ ಭಾನುವಾರ, ಗ್ವಾಲಿಯರ್ನಲ್ಲಿ ಗೋಡ್ಸೆ ಅಧ್ಯಯನ ಕೇಂದ್ರವನ್ನು ತೆರೆದಿದ್ದ ಹಿಂದೂ ಮಹಾಸಭಾ, ಬಳಿಕ ಜಿಲ್ಲಾಡಳಿತದ ಮಧ್ಯಪ್ರವೇಶದಿಂದಾಗಿ ಎರಡು ದಿನಗಳಲ್ಲಿ ಮುಚ್ಚುಗಡೆಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ಮೇಲೆ ದಾಳಿ ಮಾಡುವ ಹುನ್ನಾರದಲ್ಲಿ ಭೋಪಾಲ್ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥುರಾಂ ಗೋಡ್ಸೆ ಅವರನ್ನು ದೇಶಭಕ್ತ ಎಂದು ಪ್ರಸ್ತಾಪಿಸಿರುವುದು ಮಗದೊಮ್ಮೆ ವಿವಾದಕ್ಕೆ ಕಾರಣವಾಗಿದೆ.</p>.<p>ಕಾಂಗ್ರೆಸ್ ಎಂದಿಗೂ ದೇಶಭಕ್ತರನ್ನು ನಿಂದಿಸುತ್ತಲೇ ಬಂದಿದೆ ಎಂದು 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಪ್ರಜ್ಞಾ ಸಿಂಗ್ ಠಾಕೂರ್ ವಾಗ್ದಾಳಿ ನಡೆಸಿದರು.</p>.<p>ಗೋಡ್ಸೆ ದೇಶದ ಮೊದಲ ಭಯೋತ್ಪಾದಕ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಆರೋಪದ ಬೆನ್ನಲ್ಲೇ ಪ್ರಜ್ಞಾ ಸಿಂಗ್ ಠಾಕೂರ್ ಈ ರೀತಿಯಾದ ಹೇಳಿಕೆ ನೀಡಿದ್ದಾರೆ.</p>.<p>ಕಾಂಗ್ರೆಸ್ ಎಂದಿಗೂ ದೇಶಭಕ್ತರನ್ನು ನಿಂದಿಸುತ್ತಲೇ ಬಂದಿದ್ದು, 'ಕೇಸರಿ ಉಗ್ರರು' ಎಂದು ಕರೆದಿದೆ. ಇದಕ್ಕಿಂತಲೂ ಕೆಟ್ಟದ್ದೇನೂ ಇಲ್ಲ ಮತ್ತು ಈ ವಿಷಯದ ಬಗ್ಗೆ ಹೆಚ್ಚಿನದನ್ನು ಹೇಳಲು ಬಯಸುವುದಿಲ್ಲ ಎಂದು ಗೋಡ್ಸೆ ಕುರಿತಾಗಿನ ಹೇಳಿಕೆಗೆ ಪ್ರಜ್ಞಾ ಠಾಕೂರ್ ಪ್ರತಿಕ್ರಿಯಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/mandate-of-30-days-notice-under-special-marriage-act-optional-796114.html" itemprop="url">ಅಂತರ್ ಜಾತಿ ವಿವಾಹದ ಪ್ರಕಟಣೆ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ </a></p>.<p>2019 ಮೇ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಗೋಡ್ಸೆರನ್ನು ದೇಶಭಕ್ತ ಎಂದು ಕರೆಯುವ ಮೂಲಕ ವಿವಾದಕ್ಕೀಡಾಗಿದ್ದ ಪ್ರಜ್ಞಾ ಸಿಂಗ್ ಠಾಕೂರ್, ಬಳಿಕ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚನೆ ನಡೆಸಿದ್ದರು. 2019 ನವೆಂಬರ್ನಲ್ಲಿ ಸಂಸತ್ತಿನಲ್ಲಿ ಗೋಡ್ಸೆ ಕುರಿತಾಗಿನ ವಿವಾದಾತ್ಮಕ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದರು.</p>.<p>ಕಳೆದ ಭಾನುವಾರ, ಗ್ವಾಲಿಯರ್ನಲ್ಲಿ ಗೋಡ್ಸೆ ಅಧ್ಯಯನ ಕೇಂದ್ರವನ್ನು ತೆರೆದಿದ್ದ ಹಿಂದೂ ಮಹಾಸಭಾ, ಬಳಿಕ ಜಿಲ್ಲಾಡಳಿತದ ಮಧ್ಯಪ್ರವೇಶದಿಂದಾಗಿ ಎರಡು ದಿನಗಳಲ್ಲಿ ಮುಚ್ಚುಗಡೆಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>