ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಬದುಕಿದ್ದಾಗ, ಮರಣಾನಂತರವೂ ಕಾಂಗ್ರೆಸ್‌ ಅವರನ್ನು ಅವಮಾನಿಸಿದೆ: ಶಾ

Last Updated 19 ಡಿಸೆಂಬರ್ 2021, 13:29 IST
ಅಕ್ಷರ ಗಾತ್ರ

ಪುಣೆ: ಬಿ.ಆರ್‌.ಅಂಬೇಡ್ಕರ್ ಅವರು ಬದುಕಿದ್ದಾಗ ಕಾಂಗ್ರೆಸ್‌ ಪಕ್ಷ ಅವರನ್ನು ಅವಮಾನಿಸಿತ್ತು. ಮರಣ ಹೊಂದಿದ ನಂತರವೂ ಅವರನ್ನು ಅವಮಾನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಆರೋಪಿಸಿದರು.

ಪುಣೆ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪನೆಗೆ ಶಿಲಾನ್ಯಾಸ ನೆರವೇರಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಅವರು ಕಚೇರಿ ಆವರಣದಲ್ಲಿ ಅಂಬೇಡ್ಕರ್‌ ಅವರ ಪ್ರತಿಮೆಯನ್ನು ಸಹ ಅನಾವರಣಗೊಳಿಸಿದರು.

‘ಅಂಬೇಡ್ಕರ್‌ ಅವರು ಬದುಕಿದ್ದಾಗ ಆಗಲಿ, ಮರಣಾನಂತರವಾಗಲಿ ಸಿಕ್ಕ ಪ್ರತಿ ಸಂದರ್ಭದಲ್ಲಿಯೂ ಕಾಂಗ್ರೆಸ್‌ ಪಕ್ಷ ಅವರನ್ನು ಅಮಾನಿಸಿದೆ’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರೇ ‘ಸಂವಿಧಾನ ದಿನ’ ಆಚರಣೆಗೆ ಕ್ರಮ ಕೈಗೊಂಡರು. ಅಂಬೇಡ್ಕರ್‌ ಅವರ ಜೀವನ–ಸಾಧನೆಗೆ ಸಂಬಂಧ ಹೊಂದಿರುವ ಐದು ಸ್ಥಳಗಳನ್ನು ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ‘ಸ್ಮೃತಿ ಸ್ಥಳ’ಗಳನ್ನಾಗಿ ಪರಿವರ್ತಿಸಲಾಗಿದೆ. ಅಂಬೇಡ್ಕರ್‌ ಅವರಿಗೆ ಮರಣೋತ್ತರವಾಗಿ ಭಾರತರತ್ನ ಗೌರವ ನೀಡಿರುವುದು ಸಹ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆಯೇ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT