<p><strong>ನವದೆಹಲಿ</strong>: ಛತ್ತೀಸಗಡದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿರುವ ನಡುವೆಯೇ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಮತ್ತಷ್ಟು ಆಪ್ತ ಶಾಸಕರು ದೆಹಲಿ ತಲುಪಿದ್ದಾರೆ.</p>.<p>ಬಘೇಲ್ ಅವರ ಬದಲಾವಣೆಗೆ ಈ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪಂಜಾಬ್ನಲ್ಲಿ ಅಮರಿಂದರ್ ಸಿಂಗ್ ಅವರ ಬದಲಾವಣೆಯ ಬೆನ್ನಲ್ಲೇ ನಡೆಯುತ್ತಿರುವ ಛತ್ತೀಸಗಡದ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.</p>.<p>2018ರ ಡಿಸೆಂಬರ್ನಲ್ಲಿ ಭೂಪೇಶ್ ಬಘೇಲ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಸಂದರ್ಭದಲ್ಲಿ ಎರಡೂವರೆ ವರ್ಷಗಳಿಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಸ್ತಾಪ ಮುಂದಿಡಲಾಗಿತ್ತು ಹಾಗೂ ಆ ಪ್ರಕಾರವಾಗಿ ಪ್ರಸ್ತುತ ಆರೋಗ್ಯ ಸಚಿವರಾಗಿರುವ ಟಿ.ಎಸ್.ಸಿಂಗ್ ದೇವ್ ದ್ವಿತಿಯಾರ್ಧದ ಹೊಣೆ ಹೊರಬೇಕಾಗುತ್ತದೆ.</p>.<p>ಟಿ.ಎಸ್.ಸಿಂಗ್ ದೇವ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಕಾತುರರಾಗಿದ್ದಾರೆ. ಅವರು ಮುಖ್ಯಮಂತ್ರಿ ಸ್ಥಾನ ಹೊರತಾಗಿ ಯಾವುದೇ ಸ್ಥಾನವನ್ನು ಪರಿಗಣಿಸಲೂ ಸಿದ್ಧರಿಲ್ಲ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಛತ್ತೀಸಗಡದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮುನ್ನೆಲೆಗೆ ಬಂದಿರುವ ನಡುವೆಯೇ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಮತ್ತಷ್ಟು ಆಪ್ತ ಶಾಸಕರು ದೆಹಲಿ ತಲುಪಿದ್ದಾರೆ.</p>.<p>ಬಘೇಲ್ ಅವರ ಬದಲಾವಣೆಗೆ ಈ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪಂಜಾಬ್ನಲ್ಲಿ ಅಮರಿಂದರ್ ಸಿಂಗ್ ಅವರ ಬದಲಾವಣೆಯ ಬೆನ್ನಲ್ಲೇ ನಡೆಯುತ್ತಿರುವ ಛತ್ತೀಸಗಡದ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವಾಗಿ ಪರಿಣಮಿಸಿದೆ.</p>.<p>2018ರ ಡಿಸೆಂಬರ್ನಲ್ಲಿ ಭೂಪೇಶ್ ಬಘೇಲ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಸಂದರ್ಭದಲ್ಲಿ ಎರಡೂವರೆ ವರ್ಷಗಳಿಗೆ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಪ್ರಸ್ತಾಪ ಮುಂದಿಡಲಾಗಿತ್ತು ಹಾಗೂ ಆ ಪ್ರಕಾರವಾಗಿ ಪ್ರಸ್ತುತ ಆರೋಗ್ಯ ಸಚಿವರಾಗಿರುವ ಟಿ.ಎಸ್.ಸಿಂಗ್ ದೇವ್ ದ್ವಿತಿಯಾರ್ಧದ ಹೊಣೆ ಹೊರಬೇಕಾಗುತ್ತದೆ.</p>.<p>ಟಿ.ಎಸ್.ಸಿಂಗ್ ದೇವ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಕಾತುರರಾಗಿದ್ದಾರೆ. ಅವರು ಮುಖ್ಯಮಂತ್ರಿ ಸ್ಥಾನ ಹೊರತಾಗಿ ಯಾವುದೇ ಸ್ಥಾನವನ್ನು ಪರಿಗಣಿಸಲೂ ಸಿದ್ಧರಿಲ್ಲ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>