ನವದೆಹಲಿ: ಕೇಂದ್ರದ ಕೃಷಿ ಮಸೂದೆಗಳು ರೈತರನ್ನು ಗುಲಾಮಗಿರಿಯತ್ತ ಒಯ್ಯಲಿದ್ದು, ಕನಿಷ್ಠ ಬೆಂಬಲ ಬೆಲೆ ಅವಕಾಶವನ್ನು ಕಸಿಯಲಿವೆ ಎಂದು ಟೀಕಿಸಿರುವ ಕಾಂಗ್ರೆಸ್ ಪಕ್ಷ, ಕೃಷಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿದೆ.
ಮೂರು ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿ ವಿವಿಧ ಕೃಷಿಕ ಸಂಘಟನೆಗಳು ಶುಕ್ರವಾರ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ. ಈ ಮಸೂದೆಗಳನ್ನು ಸಂಸತ್ತು ಅಂಗೀಕರಿಸಿದ್ದು, ರಾಷ್ಟ್ರಪತಿ ಅಂಕಿತ ದೊರೆಯಬೇಕಿದೆ.
ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಣದೀಪ್ ಸುರ್ಜೆವಾಲಾ ಅವರು ಈ ಮಸೂದೆಗಳ ಪರಿಣಾಮ ಕುರಿತು ಮಾತನಾಡಿದ್ದು, ಬಂದ್ ಅನ್ನು ಬೆಂಬಲಿಸಿದ್ದಾರೆ.
ದೋಷಪೂರಿತ ಜಿ.ಎಸ್.ಟಿ ಸಣ್ಣ ಉದ್ದಿಮೆಗಳನ್ನು ನಾಶಪಡಿಸಿತು. ನೂತನ ಕೃಷಿ ಕಾಯ್ದೆಗಳು ಕೃಷಿಕರನ್ನು ಗುಲಾಮರಾಗಿಸುತ್ತವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
A flawed GST destroyed MSMEs.
— Rahul Gandhi (@RahulGandhi) September 25, 2020
The new agriculture laws will enslave our Farmers.#ISupportBharatBandh
ಹೊಸ ಮಸೂದೆಯು ಕೃಷಿಕರಿಗೆ ಇರುವ ಕನಿಷ್ಠ ಬೆಂಬಲ ಬೆಲೆ ಅವಕಾಶವನ್ನು ಕಸಿದುಕೊಳ್ಳುತ್ತದೆ ಎಂದು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ. ರೈತರಿಗೆ ಬೆಲೆಯು ಸಿಗುವುದಿಲ್ಲ, ಗೌರವವೂ ಸಿಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
किसानों से MSP छीन ली जाएगी। उन्हें कांट्रेक्ट फार्मिंग के जरिए खरबपतियों का गुलाम बनने पर मजबूर किया जाएगा।
— Priyanka Gandhi Vadra (@priyankagandhi) September 25, 2020
न दाम मिलेगा, न सम्मान।
किसान अपने ही खेत पर मजदूर बन जाएगा।
भाजपा का कृषि बिल ईस्ट इंडिया कम्पनी राज की याद दिलाता है।
हम ये अन्याय नहीं होने देंगे।#BharatBandh
ಕೃಷಿಕರು ಕರೆ ನೀಡಿರುವ ಭಾರತ್ ಬಂದ್ ಅನ್ನು ಪಕ್ಷ ಬೆಂಬಲಿಸಲಿದೆ. ದೇಶದ ಕೃಷಿಕರ ಬದುಕನ್ನು ಮೋದಿ ಸರ್ಕಾರ ಕಸಿದುಕೊಳ್ಳುತ್ತಿದ್ದು, ರೈತರ ಮೇಲೆ ದಾಳಿ ನಡೆಸಿದೆ ಎಂದು ಸುರ್ಜೆವಾಲಾ ಖಂಡಿಸಿದ್ದಾರೆ.
पेट में अंगारे और मन में तूफ़ाँ लिए देश का अन्नदाता किसान और भाग्यविधाता खेत मज़दूर #भारत_बंद करने को मजबूर है।
— Randeep Singh Surjewala (@rssurjewala) September 25, 2020
अहंकारी मोदी सरकार को न उसके मन की व्यथा दिखती न उसकी आत्मा की पीड़ा महसूस होती।
आइये, भारत बंध में किसान-मज़दूर के साथ खड़े हों, संघर्ष का संकल्प लें।#BharatBandh pic.twitter.com/I7I23v9bpp
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.