ದೆಹಲಿಯಲ್ಲಿ ನಿಜಾಮುದ್ದಿನ್, ಇಂಡಿಯಾ ಗೇಟ್ ಸರ್ಕಲ್, ಐಟಿಒ, ದೆಹಲಿ ಕೌಂಟ್, ದರಿಯಾಗಂಜ್ ನಂತರ ಕೆಂಪು ಕೋಟೆಯತ್ತ ಯಾತ್ರೆಯು ಸಾಗಲಿದೆ. ಹೊಸ ವರ್ಷದ ಪ್ರಯುಕ್ತ ಯಾತ್ರೆಗೆ 9ದಿನ ವಿಶ್ರಾಂತಿ ನೀಡಲಾಗಿದ್ದು ಜನವರಿ 3ರಿಂದ ಪುನಃ ಪ್ರಾರಂಭವಾಗಲಿದೆ. ಬಳಿಕ ಹರಿಯಾಣಕ್ಕೆ ಹಿಂತಿರುಗಿ ಪಂಜಾಬ್ ಮೂಲಕ ಜಮ್ಮು ಮತ್ತು ಕಾಶ್ಮೀರದತ್ತ ಯಾತ್ರೆ ಸಾಗಲಿದೆ ಎಂದು ವಕ್ತಾರ ಮಾಹಿತಿ ನೀಡಿದ್ದಾರೆ.