ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆಗಳ ಕುರಿತು ಆಂದೋಲನ: ಕಾಂಗ್ರೆಸ್ ಪಕ್ಷದ ಉನ್ನತ ಸಮಿತಿಯಲ್ಲಿ ಪ್ರಿಯಾಂಕಾ

Last Updated 2 ಸೆಪ್ಟೆಂಬರ್ 2021, 15:24 IST
ಅಕ್ಷರ ಗಾತ್ರ
ನವದೆಹಲಿ: ರಾಷ್ಟ್ರೀಯ ಸಮಸ್ಯೆಗಳ ಕುರಿತು ನಿರಂತರ ಆಂದೋಲನಗಳನ್ನು ನಡೆಸಲು ಕಾಂಗ್ರೆಸ್ ಪಕ್ಷವು ಪ್ರಿಯಾಂಕಾ ಗಾಂಧಿ ಜತೆಗೆ ಉನ್ನತ ಮಟ್ಟದ ಸಮಿತಿ ರಚಿಸಿದೆ.
ಬಿಜೆಪಿಯ ಕಟು ಹಿಂದುತ್ವ ರಾಜಕಾರಣದ ಟೀಕಾಕಾರರಾದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪ್ರಿಯಾಂಕಾ ಹೊರತುಪಡಿಸಿ, ಒಂಬತ್ತು ಸದಸ್ಯರ ಸಮಿತಿಯಲ್ಲಿ ಸಂಸದ ಉತ್ತಮ್ ಕುಮಾರ್ ರೆಡ್ಡಿ, ರಾಜ್ಯಸಭಾ ಸಂಸದ ರಿಪುನ್ ಬೋರಾ, ಮನೀಶ್ ಚತ್ರಥ, ಬಿ.ಕೆ ಹರಿಪ್ರಸಾದ್, ಉದಿತ್ ರಾಜ್, ರಾಗಿಣಿ ನಾಯಕ್ ಮತ್ತು ಜುಬೇರ್ ಖಾನ್ ಇದ್ದಾರೆ.

ರಾಷ್ಟ್ರೀಯ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲಿರುವ ಈ ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಕರಡು ರಚನೆಯು ಮಹತ್ವ ಪಡೆದುಕೊಂಡಿದೆ. ಪ್ರಿಯಾಂಕಾ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ವ್ಯಾಪ್ತಿ ಮೀರಿದ ಸಮಸ್ಯೆಗಳನ್ನು ಅಧಿಕೃತವಾಗಿ ಕೈಗೆತ್ತಿಕೊಳ್ಳುತ್ತಿದ್ದಾರೆ.

ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಸರ್ಕಾರವು ಪ್ರತಿ ತಿಂಗಳು ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸುತ್ತಿದೆ. ಮೂರು-ನಾಲ್ಕು ತಿಂಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 60 ರಿಂದ 70 ಬಾರಿ ಹೆಚ್ಚಿಸಲಾಗಿದೆ ಎಂದು ಕಿಡಿಕಾರಿದರು.

19 ರಾಜಕೀಯ ಪಕ್ಷಗಳ ನಾಯಕರು ಸೆಪ್ಟೆಂಬರ್ 20ರಿಂದ 30 ರವರೆಗೆ ದೇಶದಾದ್ಯಂತ ಜಂಟಿಯಾಗಿ ಪ್ರತಿಭಟನೆ ಆಯೋಜಿಸುವುದಾಗಿ ಆ.20 ರಂದು ಘೋಷಿಸಿದ ನಂತರ ಈ ಸಮಿತಿ ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT