‘ಮುಂಬರುವ ಚುನಾವಣೆಯಲ್ಲಿ ಮತದಾರರಿಗೆ ತಲಾ ₹ 6 ಸಾವಿರ ನೀಡಿ ಮತ ಕೇಳಲಾಗುವುದು. ಎದುರಾ
ಳಿಗಿಂತ ₹ 10 ಕೋಟಿ ಹೆಚ್ಚು ಖರ್ಚು ಮಾಡಲು ನಾವು ಸಿದ್ಧರಿದ್ದೇವೆ’ ಎಂಬ ಹೇಳಿಕೆ ನೀಡಿರುವ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ನಿಯೋಗ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಜ. 25ರಂದು ದೂರು ನೀಡಿತ್ತು. ಆಯೋಗಕ್ಕೂ ದೂರು ನೀಡಿತ್ತು. ಆದರೆ, ಆಯೋಗದ ಅಧಿಕಾರಿಗಳು, ಪೊಲೀಸರು ಈವರೆಗೆ ಕ್ರಮ ಕೈಗೊಂಡಿಲ್ಲ’ ಎಂದು ದೂರಿನಲ್ಲಿ ತಿಳಿಸಲಾಗಿದೆ.