ಇಬ್ಬರು ಅಭ್ಯರ್ಥಿಗಳಿಗೂ ಸಮಾನ ಅವಕಾಶ ಇದೆ. ಚುನಾವಣೆಯು ಏಕಮುಖವಾಗಿ ನಡೆಯಲಿದೆ ಎಂಬ ಕಳವಳ ಇಲ್ಲ. ಚುನಾವಣಾ ಪ್ರಕ್ರಿಯೆ ಕುರಿತು ಒಂದು ದೂರು ದಾಖಲಾಗಿದೆ ಎಂದು ಅವರು ತಿಳಿಸಿದರು. ಆದರೆ, ಅದು ಯಾರು ಕೊಟ್ಟ ದೂರು ಎಂಬುದನ್ನು ಬಹಿರಂಗಪಡಿಸಲಿಲ್ಲ. ಪಕ್ಷದ ಕೆಲವು ಪದಾಧಿಕಾರಿಗಳು ಖರ್ಗೆ ಅವರ ಪರವಾಗಿ ಬಹಿರಂಗವಾಗಿಯೇ ಪ್ರಚಾರ ನಡೆಸಿದ್ದರ ಬಗ್ಗೆ ತರೂರ್ ಅವರು ದೂರು ಕೊಟ್ಟಿದ್ದಾರೆ ಎಂದು ವರದಿಯಾಗಿದೆ.