ಹಿಂದಿಯಲ್ಲಿ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ‘ಚುನಾವಣಾ ಗಿಮಿಕ್ನ ಭಾಗವಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಎಸ್ಪಿಯಂತಹ ಪಕ್ಷಗಳು ಇಂಥ ಭರವಸೆಗಳನ್ನು ನೀಡಲು ಆರಂಭಿಸಿವೆ. ಇದರ ಭಾಗವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಿಕ್ಕೆ ಬಂದರೆ, ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್ ಮತ್ತು ಸ್ಕೂಟಿ ಕೊಡುವ ಭರವಸೆ ನೀಡಿದೆ. ಆದರೆ, ಅವರನ್ನು ಯಾರು, ಏಕೆ ಮತ್ತು ಹೇಗೆ ನಂಬಬಹುದು ಎಂಬುದೇ ಮೂಲ ಪ್ರಶ್ನೆಯಾಗಿದೆ‘ ಎಂದು ಹೇಳಿದರು.