ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು: ಬಿಜೆಪಿಯತ್ತ ಎಂಟು ಶಾಸಕರ ಚಿತ್ತ?

Last Updated 20 ಜುಲೈ 2021, 15:40 IST
ಅಕ್ಷರ ಗಾತ್ರ

ಗುವಾಹಟಿ: ಮಣಿಪುರದ ಕಾಂಗ್ರೆಸ್‌ ಘಟಕದಲ್ಲಿ ಬಿಕ್ಕಟ್ಟು ಉದ್ಭವಿಸಿದೆ. ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಅಧ್ಯಕ್ಷ ಗೋವಿನ್‌ದಾಸ್‌ ಕೊಂತೌಜಮ್ ಮತ್ತು ಪಕ್ಷದ ಕನಿಷ್ಠ ಎಂಟು ಶಾಸಕರು ಬಿಜೆಪಿ ಹೈಕಮಾಂಡ್‌ನ ಜೊತೆ ಸಂಪರ್ಕದಲ್ಲಿದ್ದು, ಪಕ್ಷಾಂತರಕ್ಕೆ ಸಜ್ಜಾಗಿದ್ದಾರೆ ಎಂಬ ವರದಿಗಳಿವೆ.

ಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕೊಂತೌಜಮ್‌ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆಯು ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ತುಮುಲವನ್ನು ಹೆಚ್ಚಿಸಿದೆ. ಈ ಕುರಿತು ಪ್ರತಿಕ್ರಿಯಿಸಲು ಕಾಂಗ್ರೆಸ್‌ ವಕ್ತಾರರು ನಿರಾಕರಿಸಿದ್ದಾರೆ.

ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ನಿರ್ದೇಶನದಂತೆ ರಾಜ್ಯ ಉಸ್ತುವಾರಿ ಭಕ್ತ ಚರಣ್‌ ಅವರು ಬುಧವಾರ ರಾಜ್ಯಕ್ಕೆ ಬರುತ್ತಿದ್ದು, ಮುಖಂಡರ ಜೊತೆಗೆ ಚರ್ಚಿಸುವರು. ರಾಜ್ಯದ ಬೆಳವಣಿಗೆಗಳ ಅರಿವು ಸೋನಿಯಾಗಾಂಧಿ ಅವರಿಗೆ ಇದೆ ಎಂದು ವಕ್ತಾರರಾದ ನಿಂಗೊಂಬಮ್‌ ಭೂಪೇಂದ್ರ ಹೇಳಿದರು.

ಮಣಿಪುರ 2017ರವರೆಗೂ ಕಾಂಗ್ರೆಸ್‌ನ ಭದ್ರನೆಲೆಯಾಗಿತ್ತು. ಬಿಜೆಪಿ 2017ರಲ್ಲಿ ನಾಗಾ ಪೀಪಲ್ಸ್‌ ಫ್ರಂಟ್‌ ಮತ್ತು ನ್ಯಾಷನ್‌ ಪೀಪಲ್ಸ್‌ ಪಾರ್ಟಿ ಸಹಯೋಗದಲ್ಲಿ ಅಧಿಕಾರಕ್ಕೆ ಏರಿತ್ತು. 28 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರಹೊಮ್ಮಿದ್ದರೂ, 21 ಸ್ಥಾನವನ್ನಷ್ಟೇ ಗೆದ್ದಿದ್ದ ಬಿಜೆಪಿ ನೇತೃತ್ವದ ಮೈತ್ರಿಕೂಟ ಸರ್ಕಾರ ರಚಿಸುವುದನ್ನು ತಡೆಯಲು ಆಗಿರಲಿಲ್ಲ. ಮಣಿಪುರದಲ್ಲಿ ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT