ನವದೆಹಲಿ: ಕಾಂಗ್ರೆಸ್ ನಾಯಕತ್ವದ ರೋಗಗ್ರಸ್ತ ಮನಸ್ಥಿತಿಯುಹಿಂದೂ ಧರ್ಮದ ಬಗ್ಗೆ ದ್ವೇಷಭಾವನೆ ಹೊಂದಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಟೀಕಿಸಿದ್ದಾರೆ. ಹಿಂದುತ್ವದ ಬಗ್ಗೆ ರಾಹುಲ್ ಗಾಂಧಿ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ರಾಹುಲ್ ಗಾಂಧಿಯ ಅತ್ಯಾಪ್ತರಾದ ಸಲ್ಮಾನ್ ಖುರ್ಷಿದ್, ಶಶಿ ತರೂರ್ ಮತ್ತು ಚಿದಂಬರಂ ಸಹ ಧರ್ಮವನ್ನು ಗುರಿಯಾಗಿಸಿಕೊಂಡಿದ್ದರು ಎಂದು ಆರೋಪಿಸಿದ್ದಾರೆ.