ರಾಜ್ಯ ಕಾಂಗ್ರೆಸ್ ನಾಯಕತ್ವದ ಕಾರ್ಯವೈಖರಿಯನ್ನು ಟೀಕಿಸಿದ ಅವರು, ‘ಜನರ ಸಮಸ್ಯೆಗಳ ಬಗ್ಗೆ ಸ್ಪಷ್ಟವಾದ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಇಂಥ ಸನ್ನಿವೇಶದಲ್ಲಿ ಮುಂದೆ ಕಾರ್ಯಕರ್ತರ ಭಾವನೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂಬ ಅರಿವಿನಿಂದ ನಾನು ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದೇನೆ‘ ಎಂದು ಅವರು ಹೇಳಿದರು.