ಶೂನ್ಯವೇಳೆಯಲ್ಲಿ ಈ ವಿಷಯದ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ‘ಪ್ರತಿ ಏಳು ಭಾರತೀಯರಲ್ಲಿ ಒಬ್ಬರು ಖಿನ್ನತೆಯಿಂದ ಬಳಲುತ್ತಿದ್ದಾರೆ. ಪಿಡುಗಿನ ಈ ಅವಧಿಯಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಂಖ್ಯೆ ಏರಿಕೆಯಾಗಿದ್ದು, ಪ್ರಮುಖವಾಗಿ ವಿದ್ಯಾರ್ಥಿಗಳು ಹಾಗೂ ಮಕ್ಕಳು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಶಿಕ್ಷಣಕ್ಕೆ ಆನ್ಲೈನ್ ಸಂಪರ್ಕದ ಕೊರತೆ, ಮಧ್ಯಾಹ್ನದ ಬಿಸಿಯೂಟ ಲಭ್ಯವಿರದೇ ಇರುವುದು, ಕೊರೊನಾ ಸೋಂಕಿಗೆ ಒಳಗಾಗುವ ಭಯವೇ ಇದಕ್ಕೆ ಕಾರಣವಾಗುತ್ತಿದೆ’ ಎಂದರು.