ರಾಯ್ ಬರೇಲಿ ಮತ್ತು ಅಮೇಥಿ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಅವರು ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಮಧ್ಯ ಪ್ರದೇಶ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಿಂದ ಮೂರು ಬಾರಿ ರಾಜ್ಯ ಸಭಾ ಸದಸ್ಯರಾಗಿದ್ದರು. 1986ರಲ್ಲಿ ಮೊದಲ ಬಾರಿಗೆ ರಾಜ್ಯ ಸಭಾ ಸದಸ್ಯರಾದ ಸತೀಶ್, 1991ರಲ್ಲಿ ರಾಜೀವ್ ಗಾಂಧಿ ನಿಧನರಾದ ಬಳಿಕ ಅಮೇಥಿ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಎದುರಿಸಿ ಗೆದ್ದರು.