ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 12 ರಾಜ್ಯಗಳ ಮೂಲಕ ಭಾರತ್ ಜೋಡೊ ಯಾತ್ರೆ ಸಾಗುತ್ತಿದೆ. ಯಾತ್ರೆಗಾಗಿ ಗೊತ್ತುಪಡಿಸಿದ ಮಾರ್ಗ ಹೊರತುಪಡಿಸಿ, ಇತರ ರಾಜ್ಯಗಳಿಗೆ ಯಾತ್ರೆ ತೆರಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಲ್ಲಿ ಪ್ರತ್ಯೇಕವಾಗಿ ಯಾತ್ರೆ ನಡೆಸಿ ಜನರನ್ನು ಸಂಘಟಿಸಲು ಉದ್ದೇಶಿಸಲಾಗಿದೆ ಎಂದು ಜೈರಾಂ ರಮೇಶ್ ಹೇಳಿದ್ದಾರೆ.