ಬಿಹಾರದ ವಾಲ್ಮೀಕಿ ನಗರದಲ್ಲಿ ಬುಧವಾರ ನಡೆದ ಚುನಾವಣಾ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 'ಕಾಂಗ್ರೆಸ್ ಪಕ್ಷವು ಈ ವರೆಗೂ ದೇಶಕ್ಕೆ ನಿರ್ದೇಶನ ನೀಡುತ್ತ ಬಂದಿದೆ. ನಾವು ನರೇಗಾ ಯೋಜನೆ ತಂದಿದ್ದೇವೆ. ಸಾಲ ಮನ್ನಾ ಮಾಡಿದ್ದೇವೆ. ದೇಶ ನಡೆಸುವುದು, ರೈತರೊಂದಿಗೆ ನಿಲ್ಲುವುದು ಮತ್ತು ಉದ್ಯೋಗ ಸೃಷ್ಟಿಸುವುದು ನಮಗೆ ತಿಳಿದಿದೆ. ಆದರೆ, ಸುಳ್ಳು ಹೇಳುವುದು ನಮಗೆ ತಿಳಿದಿಲ್ಲ. ಸುಳ್ಳು ಹೇಳುವ ವಿಚಾರದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸ್ಪರ್ಧಿಸಲು ನಮ್ಮಿಂದ ಸಾಧ್ಯವಿಲ್ಲ' ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ.