ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರ ಸಾರ್ವಜನಿಕರ ಬಗ್ಗೆ ಸಂವೇದನಾಶೀಲ ಹೃದಯ ಹೊಂದಬೇಕು: ರಾಹುಲ್ ಗಾಂಧಿ

Last Updated 3 ನವೆಂಬರ್ 2021, 7:23 IST
ಅಕ್ಷರ ಗಾತ್ರ

ನವದೆಹಲಿ: ದೀಪಾವಳಿ ಆಚರಣೆ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಮೋದಿ ಸರ್ಕಾರ ಜನರಿಗಾಗಿ ಸಂವೇದನಾಶೀಲ ಹೃದಯವನ್ನು ಹೊಂದಬೇಕು ಆಶಿಸುತ್ತೇನೆ‘ ಎಂದು ಹೇಳಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ‘ಇದು ದೀಪಾವಳಿ ಆಚರಿಸುವ ಸಮಯ. ಅಗತ್ಯ ವಸ್ತುಗಳ ಬೆಲೆಗಳು ಉತ್ತುಂಗದಲ್ಲಿವೆ. ಇದು ವ್ಯಂಗ್ಯದ ವಿಷಯವಲ್ಲ. ಮೋದಿ ಸರ್ಕಾರ, ಸಾರ್ವಜನಿಕರ ಬಗ್ಗೆ ಸೂಕ್ಷ್ಮ ಹೃದಯ ಹೊಂದಬೇಕೆಂದು ನಾನು ಬಯಸುತ್ತೇನೆ‘ ಎಂದು ಹೇಳಿದ್ದಾರೆ.

ಇಂಧನ ಬೆಲೆ ಏರಿಕೆ ವಿರುದ್ಧ ಸರ್ಕಾರವನ್ನು ರಾಹುಲ್ ತೀವ್ರವಾಗಿ ಟೀಕಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್‌ ಮೇಲಿನ ತೆರಿಗೆಯ ಹೆಸರಲ್ಲಿ ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT