ಜವಾಹರಲಾಲ್ ನೆಹರೂ ಪುಣ್ಯತಿಥಿ: ಪ್ರಧಾನಿ ಮೋದಿ, ಸೋನಿಯಾ ಸೇರಿ ಗಣ್ಯರಿಂದ ನಮನ

ನವದೆಹಲಿ: ಇಂದು (ಶುಕ್ರವಾರ) ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ 58ನೇ ಪುಣ್ಯತಿಥಿ. ಈ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕರ ಗಣ್ಯರು ನಮನ ಸಲ್ಲಿಸಿದ್ದಾರೆ.
ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದ್ದಾರೆ.
‘ಸ್ವಾತಂತ್ರ್ಯಕ್ಕಾಗಿ ಅಚಲವಾದ ಸಮರ್ಪಣೆ, ಉತ್ತಮ ನಾಳೆಗಾಗಿ ಅಪ್ರತಿಮ ದೃಷ್ಟಿ, ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯಲು ರಾಜಿಯಾಗದ ಮನೋಭಾವ. ಪಂ. ಜವಾಹರಲಾಲ್ ನೆಹರು ಅವರು ಇಂದಿಗೂ ಭಾರತವನ್ನು ಶ್ರೇಷ್ಠತೆಯತ್ತ ಮುನ್ನಡೆಸುತ್ತಿರುವ ನಾಯಕರಲ್ಲಿ ಒಬ್ಬರು’ ಎಂದು ಕಾಂಗ್ರೆಸ್ ಅಧಿಕೃತ ಟ್ವಿಟರ್ನಲ್ಲಿ ಹೇಳಿದೆ.
There were two things on his mind.
Independence of our nation.
Prosperity of our people.And no force on earth, even the biggest empire of the time, could not stop him from relentlessly working to realise these dreams.
Pt. Nehru was fearlessness personified.#RememberingNehru pic.twitter.com/w6PwoUQWmf
— Congress (@INCIndia) May 27, 2022
‘ನೆಹರು ಅವರ ಮನಸ್ಸಿನಲ್ಲಿ ಎರಡು ವಿಷಯಗಳಿದ್ದವು. ಒಂದು ನಮ್ಮ ರಾಷ್ಟ್ರದ ಸ್ವಾತಂತ್ರ್ಯ, ಮತ್ತೊಂದು ನಮ್ಮ ಜನರ ಏಳಿಗೆ. ನಿರ್ಭೀತಿ ವ್ಯಕ್ತಿತ್ವ ಹೊಂದಿದ್ದ ನೆಹರೂ ಅವರು ಭಾರತದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಅಭಿವೃದ್ಧಿಗೆ ಉತ್ಸಾಹದಿಂದ ಅವಿರತವಾಗಿ ಶ್ರಮಿಸಿದ್ದಾರೆ. ದೇಶಕ್ಕಾಗಿ ಅವರು ಕಂಡ ಕನಸುಗಳನ್ನು ನನಸಾಗಿಸಲು ಪಟ್ಟುಬಿಡದೆ ಶ್ರಮಿಸಿದ್ದಾರೆ’ ಎಂದು ಕಾಂಗ್ರೆಸ್ ಸ್ಮರಿಸಿದೆ.
An unwavered dedication to freedom,
An unparalleled vision for a better tomorrow,
An uncompromising spirit to uphold justice & equality,
Pt. Jawaharlal Nehru is that leader who guides India to greatness even today. pic.twitter.com/HO7MsyO289— Congress (@INCIndia) May 27, 2022
‘ಜವಾಹರಲಾಲ್ ನೆಹರೂ ಅವರು ನಿಧನರಾಗಿ 58 ವರ್ಷಗಳು ಕಳೆದಿವೆ. ಆದರೆ, ಅವರ ರಾಜಕೀಯ ಆಲೋಚನೆಗಳು, ರಾಷ್ಟ್ರದ ಅಭಿವೃದ್ಧಿಗೆ ಹೊಂದಿದ್ದ ದೃಷ್ಟಿಕೋನಗಳು ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಓದಿ... ಲೇಖಕಿ ಗೀತಾಂಜಲಿ ಶ್ರೀ ಅವರ ‘ಟೂಮ್ ಆಫ್ ಸ್ಯಾಂಡ್’ ಕಾದಂಬರಿಗೆ ಬೂಕರ್ ಪ್ರಶಸ್ತಿ
58 years since his passing, Pandit Jawaharlal Nehru's ideas, politics, and vision for our Nation are as relevant as they have ever been.
May the values of this immortal son of India 🇮🇳 always guide our actions & conscience. pic.twitter.com/dtckbJEltZ
— Rahul Gandhi (@RahulGandhi) May 27, 2022
‘ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Tributes to Pandit Jawaharlal Nehru Ji on his death anniversary.
— Narendra Modi (@narendramodi) May 27, 2022
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ನೆಹರೂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
1947ರ ಆಗಸ್ಟ್ 15ರಂದು ಸ್ವಾತಂತ್ರ್ಯಭಾರತದ ಮೊದಲ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನೆಹರು ಅವರು 1964ರ ವರೆಗೂ ಅಧಿಕಾರದಲ್ಲಿದರು. ಅದೇ ವರ್ಷ ಮೇ 27ರಂದು ನಿಧನರಾದರು.
कांग्रेस अध्यक्ष श्रीमती सोनिया गांधी जी ने देश के प्रथम प्रधानमंत्री पंडित जवाहरलाल नेहरू जी के समाधि स्थल शांति वन में उनकी पुण्यतिथि पर उन्हें भावपूर्ण श्रद्धांजलि अर्पित की। pic.twitter.com/AQ4q2mmxY7
— Congress (@INCIndia) May 27, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.