ನವದೆಹಲಿ: ಬೆಲೆ ಏರಿಕೆ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಿರುವ ಕಾಂಗ್ರೆಸ್, ರಾಷ್ಟ್ರವ್ಯಾಪಿ ಪ್ರತಿಭಟನೆಗೆ ನಿರ್ಧರಿಸಿದೆ. ಪ್ರಧಾನಿ ನಿವಾಸಕ್ಕೆ ಶುಕ್ರವಾರ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಆದರೆ ನಿರ್ಬಂಧ ಆದೇಶವನ್ನು ಪಕ್ಷದ ಮುಖಂಡರು ಉಲ್ಲಂಘಿಸಿದರೆ, ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ದೆಹಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ ಹಾಗೂ ಅಗತ್ಯ ವಸ್ತುಗಳಿಗೆ ಜಿಎಸ್ಟಿ ಹೇರಿಕೆ ಖಂಡಿಸಿ ಶುಕ್ರವಾರ ‘ರಾಷ್ಟ್ರಪತಿ ಭವನ ಚಲೋ’ ನಡೆಸಲೂ ಕಾಂಗ್ರೆಸ್ ಸಂಸದರು ನಿರ್ಧರಿಸಿದ್ದಾರೆ.