<p><strong>ಶಿಮ್ಲಾ:</strong> ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ(ಓಪಿಎಸ್)ಯನ್ನು ಮರುಸ್ಥಾಪಿಸಿ, ಹಿಮಾಚಲ ಪ್ರದೇಶ ಸರ್ಕಾರ ಅನುಮೋದನೆ ನೀಡಿರುವುದನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ. </p>.<p>ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರವು ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಅನುಮೋದನೆ ನೀಡಿತು.</p>.<p>ಹಿಮಾಚಲ ಪ್ರದೇಶದ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿರುವುದನ್ನು ಸ್ವಾಗತಿಸಿದ್ದಾರೆ.</p>.<p>ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆ ಮಾಡುವುದಾಗಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು.</p>.<p>ಸಚಿವ ಸಂಪುಟದ ಸಭೆ ಬಳಿಕ, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಸುದ್ದಿಗಾರರ ಜೊತೆ ಮಾತನಾಡಿ, ಈ ದಿನದಿಂದ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಲಾಭವನ್ನು ಪಡೆಯಬಹುದು. ಈ ಕುರಿತ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ, ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪನೆ ಮಾಡಲಾಗಿದೆ. ಈ ಮೂಲಕ ನಮ್ಮ ನೌಕರರಿಗೆ ಉಡುಗೊರೆ ನೀಡಲಾಗಿದೆ ಎಂದರು।</p>.<p>ಈ ಯೋಜನೆ ಜಾರಿಯಿಂದ ಸರ್ಕಾರಕ್ಕೆ ಹಣಕಾಸಿನ ಎದುರಾಗುವುದು ನಿಜವಾದರೂ, ನಾವು ಭರವಸೆ ನೀಡಿದಂತೆ ಬದ್ಧತೆ ಉಳಿಸಿಕೊಂಡಿದ್ದೇವೆ ಎಂದರು. </p>.<p>ಇದರಿಂದಾಗಿ ವಾರ್ಷಿಕ ₹800–₹900 ಕೋಟಿ ವೆಚ್ಚವಾಗಲಿದೆ. ಡೀಸೆಲ್ ಸೇರಿದಂತೆ ಇತರೆ ತೆರಿಗೆಗಳ ಮೂಲಕ ಇದನ್ನು ಸರಿದೂಗಿಸಲಾಗುವುದು ಎಂದು ಸುಖು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ(ಓಪಿಎಸ್)ಯನ್ನು ಮರುಸ್ಥಾಪಿಸಿ, ಹಿಮಾಚಲ ಪ್ರದೇಶ ಸರ್ಕಾರ ಅನುಮೋದನೆ ನೀಡಿರುವುದನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ. </p>.<p>ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರವು ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಅನುಮೋದನೆ ನೀಡಿತು.</p>.<p>ಹಿಮಾಚಲ ಪ್ರದೇಶದ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿರುವುದನ್ನು ಸ್ವಾಗತಿಸಿದ್ದಾರೆ.</p>.<p>ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆ ಮಾಡುವುದಾಗಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು.</p>.<p>ಸಚಿವ ಸಂಪುಟದ ಸಭೆ ಬಳಿಕ, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಸುದ್ದಿಗಾರರ ಜೊತೆ ಮಾತನಾಡಿ, ಈ ದಿನದಿಂದ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಲಾಭವನ್ನು ಪಡೆಯಬಹುದು. ಈ ಕುರಿತ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಹೇಳಿದ್ದಾರೆ.</p>.<p>ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ, ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪನೆ ಮಾಡಲಾಗಿದೆ. ಈ ಮೂಲಕ ನಮ್ಮ ನೌಕರರಿಗೆ ಉಡುಗೊರೆ ನೀಡಲಾಗಿದೆ ಎಂದರು।</p>.<p>ಈ ಯೋಜನೆ ಜಾರಿಯಿಂದ ಸರ್ಕಾರಕ್ಕೆ ಹಣಕಾಸಿನ ಎದುರಾಗುವುದು ನಿಜವಾದರೂ, ನಾವು ಭರವಸೆ ನೀಡಿದಂತೆ ಬದ್ಧತೆ ಉಳಿಸಿಕೊಂಡಿದ್ದೇವೆ ಎಂದರು. </p>.<p>ಇದರಿಂದಾಗಿ ವಾರ್ಷಿಕ ₹800–₹900 ಕೋಟಿ ವೆಚ್ಚವಾಗಲಿದೆ. ಡೀಸೆಲ್ ಸೇರಿದಂತೆ ಇತರೆ ತೆರಿಗೆಗಳ ಮೂಲಕ ಇದನ್ನು ಸರಿದೂಗಿಸಲಾಗುವುದು ಎಂದು ಸುಖು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>