ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಶಶಿ ತರೂರ್ ಅವರ ಸ್ಪರ್ಧೆಗೆ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಹಸಿರು ನಿಶಾನೆ ತೋರಿದ್ದರು. ಈ ಮಧ್ಯೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸಹ ಆಕಾಂಕ್ಷಿ ಎಂದು ವರದಿಯಾಗಿದೆ. ರಾಹುಲ್ ಗಾಂಧಿ ಅವರನ್ನೇ ಮತ್ತೊಮ್ಮೆ ಅಧ್ಯಕ್ಷರನ್ನಾಗಿ ಆಯ್ಕೆಮಾಡಬೇಕೆಂದು ಪಕ್ಷದ ಕೆಲವು ಪ್ರಮುಖ ನಾಯಕರು ಒತ್ತಡ ಹೇರಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ಚುನಾವಣಾ ಕಣ ರಂಗೇರುವ ನಿರೀಕ್ಷೆ ಇದೆ.