‘ಪ್ರಸ್ತುತದ ಈ ಹೋರಾಟವು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ವಜಾಗೊಳಿಸಿರುವುದರ ವಿರುದ್ಧವಷ್ಟೆ ಅಲ್ಲದೇ, ದೇಶದ ಪ್ರಜಾಪ್ರಭುತ್ವದ ಉಳಿವೂ ಇದೆ. ದೇಶವು ಇಂದು ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಗುತ್ತಿದೆ. ನ್ಯಾಯಾಂಗ, ಕಾರ್ಯಾಂಗ ಅಥವಾ ಮಾಧ್ಯಮ ಹೀಗೆ ಪ್ರಜಾಪ್ರಭುತ್ವದ ಎಲ್ಲ ಆಧಾರ ಸ್ತಂಭಗಳನ್ನು ಅಸ್ಥಿರಗೊಳಿಸಲಾಗಿದೆ’ ಎಂದು ಮೆಹಬೂಬಾ ದೂರಿದರು.