ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಅಧ್ಯಕ್ಷ ಸ್ಥಾನದ ರೇಸ್ನಿಂದ ಹೊರಗುಳಿದ ನಂತರ, ದಿಗ್ವಿಜಯ್ ಸಿಂಗ್ ಅವರು ತಾವು ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಇದಕ್ಕಾಗಿ ಗುರುವಾರ 10 ಸೆಟ್ ಅರ್ಜಿ ಪಡೆದುಕೊಂಡಿದ್ದರು. ಆದರೆ, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಶುಕ್ರವಾರ ದಿಗ್ವಿಜಯ ಸಿಂಗ್ ಘೋಷಣೆ ಮಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.