ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ಮಾಲಿನ್ಯ ನಿಯಂತ್ರಣ, ನಗರಪಾಲಿಕೆಯ ಆದಾಯ ದುಪ್ಪಟ್ಟುಗೊಳಿಸುವುದು ಸೇರಿದಂತೆ ಅನೇಕ ಭರವಸೆಗಳನ್ನು ನೀಡಿದೆ.
ಮೂರು ಲ್ಯಾಂಡ್ಫಿಲ್ ಪ್ರದೇಶಗಳ ತೆರವು ಮತ್ತು ತ್ಯಾಜ್ಯ ನಿರ್ವಹಣೆಗೆ ಮಾಸ್ಟರ್ ಪ್ಲ್ಯಾನ್ ರೂಪಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ನೀಡಿದೆ.
ವಾಯು ಹಾಗೂ ಜಲಮಾಲಿನ್ಯ ನಿಯಂತ್ರಿಸುವುದು, ಕೋಮು ಸೌಹಾರ್ದತೆ ಕಾಪಾಡುವುದು ಮತ್ತು ಎಂಸಿಡಿ ಆಡಳಿತದಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲುದಾರಿಕೆಗೆ ಆದ್ಯತೆ ನೀಡಿದೆ.