ಭಾನುವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ಬಹಳ ಕಾಲದಿಂದ ಭಯೋತ್ಪಾದನೆ ವಿರುದ್ಧ ಹೋರಾಡುತ್ತಿದೆ. ಸೂರತ್ ಮತ್ತು ಅಹಮದಾಬಾದ್ ಸ್ಫೋಟಗಳಲ್ಲಿ ಗುಜರಾತ್ ಸಾಕಷ್ಟು ಜನರನ್ನು ಕಳೆದುಕೊಂಡಿತ್ತು. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ನನ್ನನ್ನು ಟಾರ್ಗೆಟ್ ಮಾಡುವ ಬದಲು ಭಯೋತ್ಪಾದನೆ ಹತ್ತಿಕ್ಕಿ ಎಂದು ಕೇಳಿದ್ದೆ. ಆಗ ದೇಶದಲ್ಲಿ ಭಯೋತ್ಪಾದನೆ ಉಚ್ಛ್ರಾಯ ಸ್ಥಿತಿಯಲ್ಲಿತ್ತು ಎಂದರು.