ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಎಐಸಿಸಿ ಕಚೇರಿ ಎದುರು ಸತ್ಯಾಗ್ರಹ ನಡೆಸಿದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ನಡೆಯಿತು. ಕಾರ್ಯ ಕರ್ತರನ್ನು ತಡೆಯಲು ಪೊಲೀಸರು ಬ್ಯಾರಿ ಕೇಡ್ಗಳನ್ನು ಹಾಕಿದರು. ಕೆಲವು ಬ್ಯಾರಿಕೇಡ್ಗಳ ಮೇಲೆ ಕಾರ್ಯಕರ್ತರು ಹತ್ತಿದರು. ಕೆಲವನ್ನು ಕಿತ್ತು ಎಸೆದರು. ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಸೇರಿದಂತೆ ಹಲವು ಮುಖಂಡರು, ಕಾರ್ಯ ಕರ್ತರುರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಹಲವರನ್ನು ಪೊಲೀಸರು ವಶಕ್ಕೆ ಪಡೆದರು.