ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ ಬೆನ್ನಲ್ಲೇ ಪಕ್ಷದ ಮುಖಂಡ ರಾಹುಲ್ ಗಾಂಧಿ 'ವೆಲ್ ಡನ್' ಎಂದು ಟ್ವೀಟ್ ಮಾಡಿ, ರಾಜ್ಯ ಕಾಂಗ್ರೆಸ್ ತಂಡವನ್ನು ಅಭಿನಂದಿಸಿದ್ದಾರೆ.
'ಬದಲಾವಣೆಯ ಗಾಳಿ ಬೀಸುತ್ತಿದೆ. ಎಂದಿನಂತೆ ಪ್ರಬಲವಾಗಿ ಮುಂದುವರಿಯುತ್ತೇವೆ. ಧನ್ಯವಾದಗಳು ರಾಹುಲ್ ಗಾಂಧಿ ಜೀ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
The winds of change are blowing!
We will continue to power on, like we always do. 💪
ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಕರ್ನಾಟಕದ ಜನತೆ ಬಿಜೆಪಿಗೆ ತೋರಿಸಿಕೊಟ್ಟಿದ್ದಾರೆ. ಈ ಫಲಿತಾಂಶವು ಜನ ವಿರೋಧಿಗಳಿಗೆ ಮತ್ತು ಭ್ರಷ್ಟ ಬಿಜೆಪಿಗೆ ತಕ್ಕ ಪಾಠವಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ನಲ್ಲಿ ಹೇಳಿದ್ದಾರೆ.