ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ: ಸಂಜಯ್‌ ಝಾ ವಿರುದ್ಧ ಕಾಂಗ್ರೆಸ್‌ ಆಕ್ರೋಶ

Last Updated 17 ಆಗಸ್ಟ್ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ನಾಯಕತ್ವದಲ್ಲಿ ಬದಲಾವಣೆ ಆಗಬೇಕು ಎಂದು ಕೋರಿ ಸುಮಾರು ನೂರು ಮುಖಂಡರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಕಾಂಗ್ರೆಸ್‌ನಿಂದ ಅಮಾನತಾಗಿರುವ ಮುಖಂಡ ಸಂಜಯ್‌ ಝಾ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. ಅಂತಹ ಯಾವುದೇ ಪತ್ರ ಇಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಕಾಂಗ್ರೆಸ್‌ನ ಸದ್ಯದ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ ನೂರು ಮುಖಂಡರು ಸೋನಿಯಾಗೆ ಪತ್ರ ಬರೆದಿದ್ದಾರೆ ಎಂದು ಝಾ ಅವರು ಸೋಮವಾರ ಟ್ವೀಟ್‌ ಮಾಡಿದ್ದಾರೆ. ಕಾಂಗ್ರೆಸ್‌ ವಕ್ತಾರರಾಗಿದ್ದ ಅವರನ್ನು ಆ ಹುದ್ದೆಯಿಂದ ಇತ್ತೀಚೆಗೆ ವಜಾ ಮಾಡಲಾಗಿತ್ತು. ಬಳಿಕ ಅವರನ್ನು ಪಕ್ಷದಿಂದಲೂ ಅಮಾನತು ಮಾಡಲಾಗಿದೆ.

ಫೇಸ್‌ಬುಕ್‌ ಪ್ರಕರಣದಿಂದ ಗಮನ ಬೇರೆಡೆ ಸೆಳೆಯುವುದಕ್ಕಾಗಿ ಬಿಜೆಪಿಯ ಕುಮ್ಮಕ್ಕಿನಿಂದ ಝಾ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್‌ ಸುರ್ಜೇವಾಲಾ ಹೇಳಿದ್ದಾರೆ.

ಸೋನಿಯಾಗೆ ಪತ್ರ ಬರೆದವರಲ್ಲಿ ಸಂಸದರೂ ಇದ್ದಾರೆ. ನಾಯಕತ್ವ ಬದಲಾಗಬೇಕು ಮತ್ತು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಗೆ ಪಾರದರ್ಶಕ ಚುನಾವಣೆ ನಡೆಯಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ ಎಂದು ಝಾ ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT