ಪಕ್ಷಕ್ಕೆ ಗಟ್ಟಿ ನಾಯಕತ್ವ ಬೇಕು ಎಂದು ಸೋನಿಯಾ ಅವರಿಗೆ ಈ ಹಿಂದೆ ಪತ್ರ ಬರೆದಿದ್ದ ‘ಜಿ–23’ ಮುಖಂಡರ ಗುಂಪಿನಲ್ಲಿ ಶರ್ಮಾ ಅವರು ಇದ್ದರು. ಹಿಮಾಚಲ ಪ್ರದೇಶ ಚುನಾವಣೆ ಚಾಲನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ವಾರದ ಹಿಂದೆ ಅವರು ರಾಜೀನಾಮೆ ನೀಡಿದ್ದಾರೆ. ಪಕ್ಷದ ಹಿರಿಯ ಮುಖಂಡರಾಗಿದ್ದ ಗುಲಾಂ ನಬಿ ಆಜಾದ್ ಅವರು ಶುಕ್ರವಾರವಷ್ಟೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಸೋನಿಯಾ ಮತ್ತು ರಾಹುಲ್ ಬಗ್ಗೆ ಅವರು ರಾಜೀನಾಮೆ ಪತ್ರದಲ್ಲಿ ತೋಡಿಕೊಂಡಿರುವ ಅಸಮಾಧಾನ ಭಾರಿ ಸದ್ದು ಮಾಡಿತ್ತು.