ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷವು(ಎಎಪಿ), ಜೈನ್ ಬಂಧನದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.ಎಂಟು ವರ್ಷ ಹಳೆಯ ‘ಹುಸಿ’ ಪ್ರಕರಣದಲ್ಲಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿದೆ. ಸತ್ಯೇಂದ್ರ ಅವರು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಎಎಪಿ ಉಸ್ತುವಾರಿಯಾಗಿದ್ದಾರೆ. ಅಲ್ಲಿ ಚುನಾವಣೆ ಸೋಲುವ ಭೀತಿಯಲ್ಲಿರುವ ಬಿಜೆಪಿ, ಹೀಗೆ ಮಾಡಿದೆ ಎಂದು ಆರೋಪಿಸಿದೆ.