‘ಭಾರತದ ಹಿತಾಸಕ್ತಿ ಕಾಪಾಡುವ ನಿಲುವುಗಳಿಗೆ ಕಾಂಗ್ರೆಸ್ ಬೆಂಬಲವಾಗಿ ನಿಲ್ಲುತ್ತದೆ. ಇದಕ್ಕಾಗಿ ಪ್ರಬುದ್ಧ ರಾಜಕೀಯ ಮತ್ತು ರಾಜತಾಂತ್ರಿಕ ಪ್ರತಿಕ್ರಿಯೆಯನ್ನು ಸರ್ಕಾರದಿಂದ ನಿರೀಕ್ಷಿಸುತ್ತೇವೆ. ಆದರೆ, ನರೇಂದ್ರ ಮೋದಿ ನೇತೃತ್ವ ಸರ್ಕಾರ ಮೌನವಹಿಸಿದೆ’ ಎಂದು ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಸೋಮವಾರ ಹೇಳಿದ್ದಾರೆ.