<p><strong>ನವದೆಹಲಿ:</strong> ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದಕ್ಕೆ ಕಾಂಗ್ರೆಸ್ ಬುಧವಾರ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದೆ.</p>.<p>‘ದೇಶವು ಒಗ್ಗಟ್ಟಾಗಿ ಈ ಅನ್ಯಾಯದ ವಿರುದ್ಧಹೋರಾಟ ನಡೆಸಲಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಅಡುಗೆ ಅನಿಲ ಸಿಲಿಂಡರ್ಗಳ ದರವು ಜನವರಿ ತಿಂಗಳಿಂದ ಎಷ್ಟು ಹೆಚ್ಚಳವಾಗಿದೆ ಎನ್ನುವ ವಿವರಗಳ ಪಟ್ಟಿಯನ್ನು ರಾಹುಲ್ ಗಾಂಧಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಕಳೆದ ಏಳು ವರ್ಷಗಳಲ್ಲಿ ಅಡುಗೆ ಅನಿಲ ದರ ದುಪ್ಪಟ್ಟಾಗಿದೆ. ‘2014ರ ಮಾರ್ಚ್ 1ರಂದು ಅಡುಗೆ ಅನಿಲ ಸಿಲಿಂಡರ್ ದರ ₹410 ಇತ್ತು. 2021ರ ಸೆಪ್ಟೆಂಬರ್ 1ರಂದು ಅಡುಗೆ ಅನಿಲ ಸಿಲಿಂಡರ್ ದರ ₹884 ಆಗಿದೆ. ಬಿಜೆಪಿಗೆ ಮಾತ್ರ ಅಚ್ಛೇ ದಿನಗಳು ಬಂದಿದ್ದು, ದೇಶವನ್ನು ಲೂಟಿ ಮಾಡುತ್ತಿದೆ’ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ಸಿಂಗ್ ಸುರ್ಜೇವಾಲಾ ಕಿಡಿಕಾರಿದ್ದಾರೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಪ್ರಧಾನಿ ಜೀ, ನಿಮ್ಮ ಆಡಳಿತದಲ್ಲಿ ಕೇವಲ ಎರಡು ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಒಂದೆಡೆ, ನಿಮ್ಮ ಕೋಟ್ಯಾಧಿಪತಿ ಸ್ನೇಹಿತರ ಆಸ್ತಿಯು ಹೆಚ್ಚುತ್ತಿದೆ, ಇನ್ನೊಂದೆಡೆ, ಜನಸಾಮಾನ್ಯರ ಅಗತ್ಯ ಇರುವ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆ’ ಎಂದು ಕಿಡಿಕಾರಿದ್ದಾರೆ.</p>.<p>’ಬೆಲೆ ಏರಿಕೆಯೇ ಅಭಿವೃದ್ಧಿ ಎನ್ನುವುದಾದರೆ ಈ ಅಭಿವೃದ್ಧಿಗೆ ರಜೆ ನೀಡುವುದು ಒಳ್ಳೆಯದು’ ಎಂದು ಹೇಳಿದ್ದಾರೆ.</p>.<p>ಕಾಂಗ್ರೆಸ್ ಪಕ್ಷವು ‘ಇಂಡಿಯಾ ಅಗೆನ್ಸ್ಟ್ ಬಿಜೆಪಿಲೂಟ್’ ಹ್ಯಾಷ್ಟ್ಯಾಗ್ನಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ಅಭಿಯಾನ ಆರಂಭಿಸಿದ್ದು, ಬೆಲೆ ಏರಿಕೆಯ ಬಗ್ಗೆ ಜನಸಾಮಾನ್ಯರ ಅಭಿಪ್ರಾಯಗಳ ವಿಡಿಯೊಗಳನ್ನು ಹಂಚಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದಕ್ಕೆ ಕಾಂಗ್ರೆಸ್ ಬುಧವಾರ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದೆ.</p>.<p>‘ದೇಶವು ಒಗ್ಗಟ್ಟಾಗಿ ಈ ಅನ್ಯಾಯದ ವಿರುದ್ಧಹೋರಾಟ ನಡೆಸಲಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಅಡುಗೆ ಅನಿಲ ಸಿಲಿಂಡರ್ಗಳ ದರವು ಜನವರಿ ತಿಂಗಳಿಂದ ಎಷ್ಟು ಹೆಚ್ಚಳವಾಗಿದೆ ಎನ್ನುವ ವಿವರಗಳ ಪಟ್ಟಿಯನ್ನು ರಾಹುಲ್ ಗಾಂಧಿ ಟ್ವೀಟ್ನಲ್ಲಿ ಹಂಚಿಕೊಂಡಿದ್ದಾರೆ.</p>.<p>‘ಕಳೆದ ಏಳು ವರ್ಷಗಳಲ್ಲಿ ಅಡುಗೆ ಅನಿಲ ದರ ದುಪ್ಪಟ್ಟಾಗಿದೆ. ‘2014ರ ಮಾರ್ಚ್ 1ರಂದು ಅಡುಗೆ ಅನಿಲ ಸಿಲಿಂಡರ್ ದರ ₹410 ಇತ್ತು. 2021ರ ಸೆಪ್ಟೆಂಬರ್ 1ರಂದು ಅಡುಗೆ ಅನಿಲ ಸಿಲಿಂಡರ್ ದರ ₹884 ಆಗಿದೆ. ಬಿಜೆಪಿಗೆ ಮಾತ್ರ ಅಚ್ಛೇ ದಿನಗಳು ಬಂದಿದ್ದು, ದೇಶವನ್ನು ಲೂಟಿ ಮಾಡುತ್ತಿದೆ’ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ಸಿಂಗ್ ಸುರ್ಜೇವಾಲಾ ಕಿಡಿಕಾರಿದ್ದಾರೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಪ್ರಧಾನಿ ಜೀ, ನಿಮ್ಮ ಆಡಳಿತದಲ್ಲಿ ಕೇವಲ ಎರಡು ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಒಂದೆಡೆ, ನಿಮ್ಮ ಕೋಟ್ಯಾಧಿಪತಿ ಸ್ನೇಹಿತರ ಆಸ್ತಿಯು ಹೆಚ್ಚುತ್ತಿದೆ, ಇನ್ನೊಂದೆಡೆ, ಜನಸಾಮಾನ್ಯರ ಅಗತ್ಯ ಇರುವ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆ’ ಎಂದು ಕಿಡಿಕಾರಿದ್ದಾರೆ.</p>.<p>’ಬೆಲೆ ಏರಿಕೆಯೇ ಅಭಿವೃದ್ಧಿ ಎನ್ನುವುದಾದರೆ ಈ ಅಭಿವೃದ್ಧಿಗೆ ರಜೆ ನೀಡುವುದು ಒಳ್ಳೆಯದು’ ಎಂದು ಹೇಳಿದ್ದಾರೆ.</p>.<p>ಕಾಂಗ್ರೆಸ್ ಪಕ್ಷವು ‘ಇಂಡಿಯಾ ಅಗೆನ್ಸ್ಟ್ ಬಿಜೆಪಿಲೂಟ್’ ಹ್ಯಾಷ್ಟ್ಯಾಗ್ನಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ಅಭಿಯಾನ ಆರಂಭಿಸಿದ್ದು, ಬೆಲೆ ಏರಿಕೆಯ ಬಗ್ಗೆ ಜನಸಾಮಾನ್ಯರ ಅಭಿಪ್ರಾಯಗಳ ವಿಡಿಯೊಗಳನ್ನು ಹಂಚಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>