ಈ ಕುರಿತು ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನಾ ಶಿಬಿರದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಕೇಳಲಾಯಿತು. ಅದಕ್ಕುತ್ತರಿಸಿದ ಕಾಂಗ್ರೆಸ್ ನಾಯಕ ಪಿ. ಚಿದಂಬರಂ, ‘ಕೇಂದ್ರ ಸರ್ಕಾರವು ಸಾಕಷ್ಟು ಪ್ರಮಾಣದಲ್ಲಿ ಗೋಧಿ ಸಂಗ್ರಹಿಸಲು ವಿಫಲವಾಗಿರುವುದೇ ಇದಕ್ಕೆ ಕಾರಣ ಎಂದು ಭಾವಿಸುತ್ತೇನೆ. ಗೋಧಿ ಉತ್ಪಾದನೆ ಕಡಿಮೆಯಾಗಿದೆ ಎನ್ನಲಾಗದು, ಸ್ವಲ್ಪ ಹೆಚ್ಚು–ಕಡಿಮೆ ಆಗಿರಬಹುದು. ವಾಸ್ತವವಾಗಿ ಸ್ವಲ್ಪ ಹೆಚ್ಚೇ ಇರಬಹುದು’ ಎಂದು ಹೇಳಿದ್ದಾರೆ.