ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರಂತದ ಸಮಯದಲ್ಲಿ ಉತ್ತರಾಖಂಡದೊಂದಿಗೆ ಕಾಂಗ್ರೆಸ್ ನಿಲ್ಲಲಿದೆ: ಸೋನಿಯಾ ಗಾಂಧಿ

Last Updated 7 ಫೆಬ್ರುವರಿ 2021, 16:25 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿರುವ ಹಿಮಪಾತದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷದ ಕಾರ್ಯಕರ್ತರು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಅಧಿಕಾರಿಗಳಿಗೆ ನೆರವಾಗಬೇಕು ಎಂದು ಕರೆ ನೀಡಿದ್ದಾರೆ.

‘ಉತ್ತರಾಖಂಡದಲ್ಲಿಉಂಟಾಗಿರುವ ಹಿಮಸ್ಫೋಟ, ಪ್ರವಾಹದ ಆಘಾತಕಾರಿ ಸುದ್ದಿಯಿಂದ ಆತಂಕಗೊಂಡಿದ್ದೇನೆ. ಗಂಗಾನದಿ ಜಲಾನಯನ ಪ್ರದೇಶದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮುಂದುವರಿದು, ‘ನಾನು ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ. ಜನರು ಮತ್ತು ರಕ್ಷಣಾಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಗೆ ನೆರವಾಗಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು, ಸ್ವಯಂ ಸೇವಕರಲ್ಲಿಮನವಿ ಮಾಡುತ್ತೇನೆ. ಕಾಂಗ್ರೆಸ್‌ ಪಕ್ಷವು ಇಂತಹ ದುರಂತ ಮತ್ತು ಸಂಕಷ್ಟದ ಸಂದರ್ಭದಲ್ಲಿ ಉತ್ತರಾಖಂಡ ಜನರೊಂದಿಗೆ ನಿಲ್ಲಲಿದೆ’ ಎಂದೂ ತಿಳಿಸಿದ್ದಾರೆ.

ಇದೇವೇಳೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಇಡೀ ದೇಶವೇ ಉತ್ತರಾಖಂಡ ಜನರೊಂದಿಗೆ ನಿಲ್ಲಲಿದೆ ಎಂದು ಹೇಳಿದ್ದಾರೆ.

‘ಉತ್ತರಾಖಂಡದಲ್ಲಿ ಹಿಮಸ್ಫೋಟದಿಂದಾಗಿ ಉಂಟಾಗಿರುವ ದುರಂತವು ತುಂಬಾ ದುಃಖದ ಸಂಗತಿ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ದೇಶ ಉತ್ತರಾಖಂಡ ಜನರೊಂದಿಗೆ ಇರಲಿದೆ. ನಾನು ಅಪಾಯಕ್ಕೆ ಸಿಲುಕಿರುವರಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಕಾಂಗ್ರೆಸ್‌ನ ಎಲ್ಲ ಕಾರ್ಯರ್ತರು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ನೆರವಾಗುವಂತೆ ಮನವಿ ಮಾಡುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT